AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಚಾಲುಕ್ಯರ ಕಾಲದ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ: ಹಿಂದೂಪರ ಸಂಘಟನೆಗಳ ಆಕ್ರೋಶ

ಹುಬ್ಬಳ್ಳಿಯ ಚಾಲುಕ್ಯರ ಕಾಲದ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ: ಹಿಂದೂಪರ ಸಂಘಟನೆಗಳ ಆಕ್ರೋಶ

ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 17, 2026 | 4:05 PM

Share

ಹುಬ್ಬಳ್ಳಿಯ ಪ್ರಾಚೀನ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ ಕೇಳಿಬಂದಿದೆ. ಆಗಸ್ಟ್ 5ರಂದು 25 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಪಾಲಿಕೆ ಮುಂದಾಗಿರುವುದೇ ವಿವಾದಕ್ಕೆ ಕಾರಣ. ಹಿಂದೂಪರ ಸಂಘಟನೆಗಳು ಪುಷ್ಕರಣಿ ಜಾಗವನ್ನು ಉತ್ಖನನಗೊಳಿಸಿ ರಕ್ಷಿಸುವಂತೆ ಆಗ್ರಹಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಗಸ್ಟ್ 22ರಂದು ಬೃಹತ್ ಹೋರಾಟದ ಎಚ್ಚರಿಕೆ ನೀಡಿವೆ.

ಹುಬ್ಬಳ್ಳಿ, ಆ,17: ಜಿಲ್ಲೆಯ ಅಸಾರ ಓಣಿಯಲ್ಲಿರುವ ಪ್ರಾಚೀನ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪವು ವಿವಾದಕ್ಕೆ ಕಾರಣವಾಗಿದೆ. ಚಾಲುಕ್ಯರ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನದ ಪುಷ್ಕರಣಿ ಇದ್ದ ಜಾಗದಲ್ಲಿ ಆಗಸ್ಟ್ 5ರಂದು ಹುಬ್ಬಳ್ಳಿ ಪಾಲಿಕೆ 25 ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸಿದೆ ಎನ್ನಲಾಗಿದೆ. ಈ ಕುರಿತು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ನಿರ್ಮಿಸಿರುವ ಜಾಗದಲ್ಲಿ ದೇವಸ್ಥಾನಕ್ಕೆ ಸೇರಿದ ಪುಷ್ಕರಣಿ ಇತ್ತು ಎಂದು ಪ್ರತಿಪಾದಿಸಿವೆ. ಪುಷ್ಕರಣಿಯನ್ನು ಉಳಿಸಿ, ಉತ್ಖನನ ಮಾಡುವಂತೆ ಆಗ್ರಹಿಸಿವೆ. ಆದರೆ, ರಾಜ್ಯ ಪುರಾತತ್ವ ಇಲಾಖೆ ಹಾಗೂ ಪಾಲಿಕೆಯ ಅಧಿಕಾರಿಗಳು ಪುಷ್ಕರಣಿ ಇರುವ ಬಗ್ಗೆ ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸ್ಥಳೀಯರು ಹಲವು ವರ್ಷಗಳ ಹಿಂದೆ ಪುಷ್ಕರಣಿ ಇದ್ದ ಬಗ್ಗೆ ನೆನಪಿಸಿಕೊಳ್ಳುತ್ತಾರೆ. ಹಿಂದೂಪರ ಸಂಘಟನೆಗಳು ಆಗಸ್ಟ್ 22ರೊಳಗೆ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಹೋರಾಟ ನಡೆಸುವ ಎಚ್ಚರಿಕೆ ನೀಡಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us