AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಡಾಲಿ ಧನಂಜಯ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿ ಬೆಂಕಿ ಅವಘಡ

ಮೈಸೂರು: ಡಾಲಿ ಧನಂಜಯ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿ ಬೆಂಕಿ ಅವಘಡ

ದಿಲೀಪ್​, ಚೌಡಹಳ್ಳಿ
| Edited By: |

Updated on:Feb 22, 2025 | 5:27 PM

Share

ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಡಾಲಿ ಧನಂಜಯ ಅವರ ಮದುವೆ ಸೆಟ್ ಬಳಿ ಈ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳ ಕೃತ್ಯದಿಂದ ಈ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಎರಡು ಮರಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಮೈಸೂರು, ಫೆಬ್ರವರಿ 22: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿನ್ನೆ ಬೆಂಕಿ (fire) ಕಾಣಿಸಿಕೊಂಡಿತ್ತು. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ‌ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಮಧ್ಯೆ ನಗರದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಹಲವು ತ್ಯಾಜ್ಯಗಳು ಸುಟ್ಟು ಭಸ್ಮವಾಗಿದೆ. ನಗರದ ವಸ್ತುಪ್ರದರ್ಶನ ಆವರಣದಲ್ಲಿ‌ ಇಂದು ಬೃಹತ್ ಬೆಂಕಿ ಕಾಣಿಸಿಕೊಂಡಿದೆ. ಡಾಲಿ ಧನಂಜಯ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಆವರಣದ ಎರಡು ಮರಗಳು ಬೆಂಕಿಗಾಹುತಿಯಾಗಿದೆ. ವಸ್ತು ಪ್ರದರ್ಶನ ಆವರಣದಲ್ಲಿ ಹಾಕಲಾಗಿದ್ದ ತ್ಯಾಜ್ಯಕ್ಕೆ ಬೆಂಕಿ ಹಾಕಲಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ.

ಮತ್ತಷ್ಟು ವಿಡಿಯೂ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 22, 2025 05:19 PM
Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More