Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga: ವಿಧಿವಶರಾಗುವ ಮೊದಲು ಒಂಟಿಯಾಗಿ ಜೀವಿಸುತ್ತಿದ್ದ ಸನ್ಯಾಸಿಯ ಮನೆಯಲ್ಲಿ ಸಿಕ್ಕಿತು ಲಕ್ಷಾಂತರ ಹಣ!

ಮೃತರು ಅಷ್ಟೊಂದು ಹಣವನ್ನು ತಮ್ಮ ಬಳಿ ಯಾಕೆ ಇಟ್ಟುಕೊಂಡಿದ್ದರು ಅನ್ನೋದು ನಿಗೂಢವಾಗಿದೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 30, 2023 | 11:05 AM

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯಲ್ಲಿ ವಾಸವಾಗಿದ್ದ ಮತ್ತು ಸನ್ಯಾಸಿಯಾಗಿ ಒಂಟಿ ಬದುಕು ನಡೆಸುತ್ತಿದ್ದ ಗಂಗಾಧರ ಶಾಸ್ತ್ರಿ (Gangadhar Shastri) ನಿನ್ನೆ ಮೃತಪಟ್ಟಿದ್ದು ಅವರ ಮನೆಯಲ್ಲಿ ಲಕ್ಷಾಂತರ ಹಣ ಪತ್ತೆಯಾಗಿದೆ. ನಮಗೆ ಲಭ್ಯವಿರುವ ಮೂಲಗಳ ಪ್ರಕಾರ ಶಾಸ್ತ್ರಿಯವರ ಹೆಸರಲ್ಲಿ 16 ಎಕರೆ ಜಮೀನು (farmland) ಮತ್ತು 4 ಎಕರೆ ತೆಂಗಿನ ತೋಟವಿದೆ. ಅಂತ್ಯಸಂಸ್ಕಾರ ನಡೆಸಿದ ಬಳಿಕ ಅವರು ವಾಸವಾಗಿದ್ದ ಮನೆಯನ್ನು ಸ್ಥಳೀಯರು ಸ್ವಚ್ಛಗೊಳಿಸುವಾಗ ಸುಮಾರು 30 ಲಕ್ಷ ರೂ. ಗಳಷ್ಟು ನಗದು ಸಿಕ್ಕಿದೆ. ಭಕ್ತರು (devotees) ನೀಡಿದ ಕಾಣಿಕೆ ಇದರಲ್ಲಿ ಸೇರಿದೆ ಎಂದು ಹೇಳಲಾಗಿದೆ. 70 ವರ್ಷದ ಪ್ರಾಯದವರಾಗಿದ್ದ ಶಾಸ್ತ್ರಿ ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಮತ್ತು ಬಟ್ಟೆ ಚೀಲಗಳಲ್ಲಿ ಹಣ ಕಟ್ಟಿಟ್ಟಿದ್ದು ವಿಡಿಯೋದಲ್ಲಿ ಕಾಣಿಸುತ್ತದೆ. ಮೃತರು ಅಷ್ಟೊಂದು ಹಣವನ್ನು ತಮ್ಮ ಬಳಿ ಯಾಕೆ ಇಟ್ಟುಕೊಂಡಿದ್ದರು ಅನ್ನೋದು ನಿಗೂಢವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್