ಹುಳಿಯಾರಿನಲ್ಲಿ ಕಳ್ಳರ ಕೈಚಳಕ! ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ತುಮಕೂರು ಜಿಲ್ಲೆಯ ಹುಳಿಯಾರಿನಲ್ಲಿ ದೇವಸ್ಥಾನಕ್ಕೆ ಹೋಗಿದ್ದ ದಂಪತಿ ಮನೆ ಕಳ್ಳರ ಪಾಲಾಗಿದೆ. ನಂಜನಗೂಡಿನ ನಂಜುಂಡೇಶ್ವರ ದರ್ಶನಕ್ಕೆ ತೆರಳಿದ್ದ ರೋಷನ್ ಅವರ ಮನೆಯ ಬೀಗ ಮುರಿದು ಕಳ್ಳರು ಕೈಚಳಕ ತೋರಿಸಿದ್ದಾರೆ. ನೆರೆಹೊರೆಯವರು ಮಾಹಿತಿ ನೀಡಿದ ನಂತರ ದಂಪತಿ ಸ್ಥಳಕ್ಕೆ ಮರಳಿದ್ದು, ಹುಳಿಯಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಕಳುವಾದ ಆಸ್ತಿಯ ಮೌಲ್ಯದ ಕುರಿತು ಮಾಹಿತಿ ಲಭ್ಯವಾಗಿಲ್ಲ.
ಹುಳಿಯಾರು, ಮಾ.25: ದೇವರ ದರ್ಶನಕ್ಕೆಂದು ಹೋದ ದಂಪತಿಯ ಮನೆಯೇ ಕಳ್ಳರ ಪಾಲಾಗಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ನಡೆದಿದೆ. ರೋಷನ್ ಎಂಬುವವರ ಮನೆಯ ಬೀಗ ಮುರಿದಿರುವ ಕಳ್ಳರು ಕೈಚಳಕ ತೋರಿಸಿದ್ದಾರೆ. ಹುಳಿಯಾರಿನ ನಿವಾಸಿ ರೋಷನ್ ಅವರು ತಮ್ಮ ಪತ್ನಿಯೊಂದಿಗೆ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿಯ ದರ್ಶನಕ್ಕಾಗಿ ನಿನ್ನೆ ರಾತ್ರಿ ಮನೆಯಿಂದ ಹೊರಟಿದ್ದರು.ಇಂದು ಮಧ್ಯಾಹ್ನ ರೋಷನ್ ಅವರು ದೇವಸ್ಥಾನದಲ್ಲಿದ್ದಾಗ, ಅವರ ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ನೆರೆಹೊರೆಯವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಮನೆಯೊಳಗೆ ಹೋಗಿ ನೋಡುವಂತೆ ತಿಳಿಸಿದಾಗ ಕಳ್ಳತನವಾಗಿರುವುದು ದೃಢಪಟ್ಟಿದೆ.ವಿಷಯ ತಿಳಿಯುತ್ತಿದ್ದಂತೆಯೇ ನಂಜನಗೂಡಿನಿಂದ ವಾಪಸ್ಸಾದ ದಂಪತಿ, ಸದ್ಯ ಹುಳಿಯಾರು ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳರು ಎಷ್ಟು ಮೌಲ್ಯದ ಆಭರಣ ಮತ್ತು ಹಣ ದೋಚಿದ್ದಾರೆ ಎಂಬುದು ತನಿಖೆಯ ನಂತರ ತಿಳಿಯಬೇಕಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ

