ದೇವನಹಳ್ಳಿ, ಅ.15: ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ (Ghati Subramanya Temple) ಕ್ಷೇತ್ರದಲ್ಲಿ ಭಕ್ತರು ಹಾಗೂ ದೇವಾಲಯ ಆಡಳಿತ ಮಂಡಳಿಯಿಂದ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಭಕ್ತರ ಕಾಣಿಕೆಯಾಗಿ 51 ಲಕ್ಷದ 71 ಸಾವಿರ ಹಣ ಸಂಗ್ರಹವಾಗಿದೆ. 2 ಗ್ರಾಂ ಚಿನ್ನ ಹಾಗೂ 1 ಕೆಜಿ 94 ಗ್ರಾಂ ಬೆಳ್ಳಿಯನ್ನ ಭಕ್ತರು ಕಾಣಿಕೆ ರೂಪದಲ್ಲಿ ಸುಬ್ರಹ್ಮಣ್ಯ ಸ್ವಾಮಿಗೆ ಅರ್ಪಣೆ ಮಾಡಿದ್ದಾರೆ. ದಸರಾ ಹಬ್ಬ ಮುಗಿದ ಹಿನ್ನಲೆ ದೇವಾಲಯ ಆಡಳಿತ ಮಂಡಳಿ ಹುಂಡಿ ಎಣಿಕೆ ಮಾಡಿತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ