ಕೊಲೆ ಆರೋಪಿ ದರ್ಶನ್​ ನೋಡಲು ಕಿಕ್ಕಿರಿದು ಸೇರಿದ ಜನರಿಗೆ ಪೊಲೀಸ್​ ಲಾಠಿ ರುಚಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಾಯಿತು. ನಂತರ ಎಲ್ಲರನ್ನೂ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಗೆ ವಾಪಸ್​ ಕರೆದುಕೊಂಡು ಬರಲಾಯಿತು. ಈ ಸಂದರ್ಭದಲ್ಲಿ ನಟ ದರ್ಶನ್​ ನೋಡಲು ನೂರಾರು ಅಭಿಮಾನಿಗಳು ಸೇರಿದ್ದರು. ವಾಹನಗಳಿಗೆ ಅಡ್ಡ ಬಂದ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.

ಕೊಲೆ ಆರೋಪಿ ದರ್ಶನ್​ ನೋಡಲು ಕಿಕ್ಕಿರಿದು ಸೇರಿದ ಜನರಿಗೆ ಪೊಲೀಸ್​ ಲಾಠಿ ರುಚಿ
|

Updated on:Jun 12, 2024 | 10:51 PM

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬುವವರನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪ ದರ್ಶನ್​ (Darshan) ಮೇಲಿದೆ. ಸಹಚರರ ಜೊತೆ ಸೇರಿ ಈ ಕೃತ್ಯ ನಡಿಸಿದ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇಂದು (ಜೂನ್​ 12) ಎಲ್ಲ ಆರೋಪಿಗಳನ್ನು ಘಟನಾ ಸ್ಥಳವಾದ ಪಟ್ಟಣಗೆರೆ ಶೆಡ್​ಗೆ ಕರೆದುಕೊಂಡು ಹೋಗಿ ಮಹಜರು ಮಾಡಲಾಯಿತು. ಬಳಿಕ ದರ್ಶನ್​ ಮತ್ತು ಸಹಚರರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ವಾಪಸ್​ ಕರೆದುಕೊಂಡು ಬರಲಾಯಿತು. ಈ ವೇಳೆ ದರ್ಶನ್​ ಅವರನ್ನು ನೋಡಲು ನೂರಾರು ಅಭಿಮಾನಿಗಳು (Darshan Fans) ಜಮಾಯಿಸಿದ್ದರು. ದಾರಿಗೆ ಅಡ್ಡ ಬಂದ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ದರ್ಶನ್​ ಜೊತೆ ಪವಿತ್ರಾ ಗೌಡ ಸೇರಿ ಒಟ್ಟು 17 ಜನರ ಮೇಲೆ ಆರೋಪ ಬಂದಿದ್ದು, 13 ಜನರನ್ನು ಬಂಧಿಸಲಾಗಿದೆ. ನಾಪತ್ತೆ ಆಗಿರುವ 4 ಜನರಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:49 pm, Wed, 12 June 24

Follow us