ಕೊಲೆ ಆರೋಪಿ ದರ್ಶನ್​ ನೋಡಲು ಕಿಕ್ಕಿರಿದು ಸೇರಿದ ಜನರಿಗೆ ಪೊಲೀಸ್​ ಲಾಠಿ ರುಚಿ

Updated on: Jun 12, 2024 | 10:51 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಾಯಿತು. ನಂತರ ಎಲ್ಲರನ್ನೂ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಗೆ ವಾಪಸ್​ ಕರೆದುಕೊಂಡು ಬರಲಾಯಿತು. ಈ ಸಂದರ್ಭದಲ್ಲಿ ನಟ ದರ್ಶನ್​ ನೋಡಲು ನೂರಾರು ಅಭಿಮಾನಿಗಳು ಸೇರಿದ್ದರು. ವಾಹನಗಳಿಗೆ ಅಡ್ಡ ಬಂದ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬುವವರನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪ ದರ್ಶನ್​ (Darshan) ಮೇಲಿದೆ. ಸಹಚರರ ಜೊತೆ ಸೇರಿ ಈ ಕೃತ್ಯ ನಡಿಸಿದ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇಂದು (ಜೂನ್​ 12) ಎಲ್ಲ ಆರೋಪಿಗಳನ್ನು ಘಟನಾ ಸ್ಥಳವಾದ ಪಟ್ಟಣಗೆರೆ ಶೆಡ್​ಗೆ ಕರೆದುಕೊಂಡು ಹೋಗಿ ಮಹಜರು ಮಾಡಲಾಯಿತು. ಬಳಿಕ ದರ್ಶನ್​ ಮತ್ತು ಸಹಚರರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ವಾಪಸ್​ ಕರೆದುಕೊಂಡು ಬರಲಾಯಿತು. ಈ ವೇಳೆ ದರ್ಶನ್​ ಅವರನ್ನು ನೋಡಲು ನೂರಾರು ಅಭಿಮಾನಿಗಳು (Darshan Fans) ಜಮಾಯಿಸಿದ್ದರು. ದಾರಿಗೆ ಅಡ್ಡ ಬಂದ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ದರ್ಶನ್​ ಜೊತೆ ಪವಿತ್ರಾ ಗೌಡ ಸೇರಿ ಒಟ್ಟು 17 ಜನರ ಮೇಲೆ ಆರೋಪ ಬಂದಿದ್ದು, 13 ಜನರನ್ನು ಬಂಧಿಸಲಾಗಿದೆ. ನಾಪತ್ತೆ ಆಗಿರುವ 4 ಜನರಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 12, 2024 10:49 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More