ಮೈಸೂರು: ಕುರಿ ಕೊಟ್ಟಿಗೆಯಂತಹ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳ ಕಲಿಕೆ

Edited By: ವಿವೇಕ ಬಿರಾದಾರ

Updated on: Jan 06, 2024 | 12:58 PM

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಅಸ್ವಾಳು ಗ್ರಾಮದ ಅಂಗನವಾಡಿ ಕೇಂದ್ರ ಕುರಿ ಕೊಟ್ಟಿಗೆಯ ಹಾಗೆ ಇದೆ. ಗ್ರಾಮದ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು, ಸುಮಾರು 17 ಮಕ್ಕಳು ಕಲಿಯುತ್ತಾರೆ. ಅಂಗನವಾಡಿಗೆ ಕೇಂದ್ರಕ್ಕೆ ಹೋಗಲು ಸಮರ್ಪಕವಾದ ರಸ್ತೆಯೂ ಇಲ್ಲ.

ಮೈಸೂರು, ಜನವರಿ 06: ಹುಣಸೂರು (Hunsur) ತಾಲೂಕಿನ ಅಸ್ವಾಳು ಗ್ರಾಮದ ಅಂಗನವಾಡಿ (Anganwadi) ಕೇಂದ್ರ ಕುರಿ ಕೊಟ್ಟಿಗೆಯ ಹಾಗೆ ಇದೆ. ಗ್ರಾಮದ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು, ಸುಮಾರು 17 ಮಕ್ಕಳು ಕಲಿಯುತ್ತಾರೆ. ಅಂಗನವಾಡಿಗೆ ಕೇಂದ್ರಕ್ಕೆ ಹೋಗಲು ಸಮರ್ಪಕವಾದ ರಸ್ತೆಯೂ ಇಲ್ಲ. ಮೋರಿಯನ್ನು ದಾಟಿ ಮಕ್ಕಳು ಅಂಗನವಾಡಿಗೆ ಹೋಗಬೇಕು. ಮೋರಿ ದಾಟಲು ಕಲ್ಲುಗಳನ್ನು ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಇನ್ನು ಅಂಗನವಾಡಿ ಕೇಂದ್ರ ಬೀಳುವ ಸ್ಥಿತಿಯಲ್ಲಿದೆ. ಕನಿಷ್ಠ ಸೌಲಭ್ಯವಿಲ್ಲದ ಅಂಗನವಾಡಿಯಲ್ಲಿ ಮಕ್ಕಳು ಕಲಿಯುತ್ತಿದ್ದಾರೆ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More