ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ

Edited By:

Updated on: Oct 08, 2025 | 9:19 PM

ಪತಿ ಚಾಕುವಿನಿಂದ ಇರಿದು ಪತ್ನಿಯನ್ನು ಹತ್ಯೆಗೈದಿರುವಂತಹ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ. ಮೂರು ಮಕ್ಕಳಾದರೂ ಪತ್ನಿ ಮೇಲೆ ಸಂಶಯ ಪಡುತ್ತಿದ್ದ ಪತಿ. ಬೀಸುವ ಕಲ್ಲು ಎತ್ತಿ ಹಾಕಿ ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ತನ್ನ ತಂದೆಯ ಕೃತ್ಯದ ಬಗ್ಗೆ ಮಗ ಹೇಳಿದ್ದಿಷ್ಟು.

ಗದಗ, ಅಕ್ಟೋಬರ್​ 08: ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ಕಂಡಕ್ಟರ್ ರಮೇಶ್ ನರಗುಂದ ತನ್ನ ಪತ್ನಿ ಯಲ್ಲಮ್ಮ ಅಲಿಯಾಸ್ ಸ್ವಾತಿಯನ್ನು ಸಂಶಯದಿಂದ ಭೀಕರವಾಗಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಮೂರು ಮಕ್ಕಳಿದ್ದರೂ ಪತ್ನಿ ಮೇಲೆ ರಮೇಶ್ ಸಂಶಯ ಪಡುತ್ತಿದ್ದರು. ಘಟನೆ ಮತ್ತು ತನ್ನ ತಂದೆ ಅಸಲಿ ಮುಖವನ್ನು ಮಗ ಬಿಚ್ಚಿಟ್ಟಿದ್ದಾನೆ.  ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More