ಈಜಲು ಹೋಗಿದ್ದ ವೈದ್ಯೆ ನೀರುಪಾಲು.. 20 ಅಡಿ ಎತ್ತರದಿಂದ ಜಿಗಿದ ಭಯಾನಕ ದೃಶ್ಯ!

Edited By:

Updated on: Feb 19, 2025 | 2:28 PM

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಹೈದರಬಾದ್ ಮೂಲದ ವೈದ್ಯೆ ನೀರು ಪಾಲಾಗಿದ್ದಾರೆ. ಸ್ನೇಹಿತ ಜತೆ ಪ್ರವಾಸಕ್ಕೆ ಬಂದಿದ್ದ ಹೈದರಬಾದ್ ಮೂಲದ ಅನನ್ಯರಾವ್ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಬಳಿಯ ತುಂಗಭದ್ರಾ ನದಿಗೆ ಈಜಾಡಲು ಹೋಗಿದ್ದಾರೆ. ಆದ್ರೆ, ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಇನ್ನು ವೈದ್ಯೆ ಗುಡ್ಡದ ಮೇಲಿಂದ ನದಿಗೆ ಜಿಗಿದಿರುವ ವಿಡಿಯೋ ಎದೆ ಝಲ್​ ಎನ್ನಿಸುತ್ತೆ.

ಕೊಪ್ಪಳ, (ಫೆಬ್ರವರಿ 19): ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೈದ್ಯೆ ನೀರು ಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಅನನ್ಯರಾವ್​(26)ನೀರು ಪಾಲದ‌ ವೈದ್ಯೆ. ಹೈದರಬಾದ್​ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅನನ್ಯರಾವ್​, ನಿನ್ನೆ (ಫೆಬ್ರವರಿ 18) ಮೂವರು ಸ್ನೇಹಿತರ ಜತೆ ಪ್ರವಾಸಕ್ಕೆ ಬಂದಿದ್ದು, ಇಂದು(ಫೆಬ್ರವರಿ 19) ಬೆಳಗ್ಗೆ ಸ್ನೇಹಿತರ ಜತೆ ನದಿಯಲ್ಲಿ ಈಜಲು ತೆರಳಿದ್ದರು. ಆದ್ರೆ, ನೀರಿನ ಅಲೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಇನ್ನು ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ವೈದ್ಯೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ಅನನ್ಯರಾವ್ ಸುಮಾರು 20 ಅಡಿ ಎತ್ತರದಿಂದ ಜಿಗಿದಿರುವ ದೃಶ್ಯ ಮಾತ್ರ ಭಯಾನಕವಾಗಿದೆ.

Published on: Feb 19, 2025 02:27 PM
Follow Us
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More