Video: ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು

ಹೈದರಾಬಾದ್​ನ ಕಾರು ಶೋರೂಂನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಜನನಿಬಿಡ ಭಾಗದ ಕುಂದಾಪುರ ಜಂಕ್ಷನ್ ಬಳಿಯಿರುವ ಶೋರೂಮ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಗಮನಾರ್ಹ ಹಾನಿಯಾಗಿದೆ.ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರೂ, ಶೋರೂಂನಲ್ಲಿ ಇರಿಸಲಾಗಿದ್ದ ಹಲವಾರು ಹೊಸ ಕಾರುಗಳು ನಾಶವಾದವು. ಆರಂಭದಲ್ಲಿ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.

ಹೈದರಾಬಾದ್​ನ ಕಾರು ಶೋರೂಂನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಜನನಿಬಿಡ ಭಾಗದ ಕೊಂಡಾಪುರ ಜಂಕ್ಷನ್ ಬಳಿಯಿರುವ ಶೋರೂಮ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಗಮನಾರ್ಹ ಹಾನಿಯಾಗಿದೆ.ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರೂ, ಶೋರೂಂನಲ್ಲಿ ಇರಿಸಲಾಗಿದ್ದ ಹಲವಾರು ಹೊಸ ಕಾರುಗಳು ನಾಶವಾದವು. ಆರಂಭದಲ್ಲಿ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.

ಪಕ್ಕದ ಸಹಸ್ರ ಉಡುಪಿ ಗ್ರ್ಯಾಂಡ್ ಹೋಟೆಲ್ ಕಟ್ಟಡಕ್ಕೂ ಬೆಂಕಿ ವ್ಯಾಪಿಸಿದ್ದರಿಂದ ಹೆಚ್ಚಿನ ಹಾನಿಯಾಗುವ ಆತಂಕ ಎದುರಾಗಿದೆ. ಪೊಲೀಸರು ಮುನ್ನೆಚ್ಚರಿಕೆಯಾಗಿ ಹತ್ತಿರದ ಕಟ್ಟಡದ ಎರಡನೇ ಮಹಡಿಯಲ್ಲಿರುವ ಜನಪ್ರಿಯ ಲಿವಿಂಗ್ ಸ್ಪೇಸ್ ಕಂಪನಿಯಿಂದ ನಿರ್ವಹಿಸಲ್ಪಡುವ ಕೊಠಡಿಗಳನ್ನು ತೆರವು ಮಾಡಿದರು. ಬೆಂಕಿಯನ್ನು ಹತೋಟಿಯಲ್ಲಿಡಲು ಮತ್ತು ಮತ್ತಷ್ಟು ಹರಡದಂತೆ ತಡೆಯಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿತ್ತು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us