ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!

Updated on: Nov 13, 2024 | 7:02 PM

ನಮ್ಮ ಜೀವನದಲ್ಲಿ ಯಾವಾಗ ಏನು ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಈ ಕ್ಷಣ ಬದುಕಿದ್ದವರು ಮುಂದಿನ ಕ್ಷಣದಲ್ಲಿ ಬದುಕಿರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚೆಗಷ್ಟೇ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಲು ಹೋದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೈದರಾಬಾದ್: ದೇವಸ್ಥಾನದಲ್ಲಿ ದೇವರಿಗೆ ಪ್ರದಕ್ಷಿಣೆ ಹಾಕುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ದೃಶ್ಯ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೈದರಾಬಾದ್ ನಗರದಲ್ಲಿ ಈ ದಾರುಣ ಘಟನೆ ನಡೆದಿದೆ. ಖಾಸಗಿ ಉದ್ಯೋಗದಲ್ಲಿರುವ ವಿಷ್ಣುವರ್ಧನ್ ಎಂಬ ವ್ಯಕ್ತಿ ಪ್ರತಿದಿನ ಬೆಳಗ್ಗೆ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗುತ್ತಿದ್ದರು. 2 ದಿನಗಳ ಹಿಂದೆ ಅವರು ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿದ್ದಾಗ ಏಕಾಏಕಿ ಹೃದಯಾಘಾತವಾಗಿ ಕುಸಿದು ಬಿದ್ದು, ಮೃತಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More