ರಸ್ತೆ ಮಧ್ಯೆ ಇದ್ದಕ್ಕಿದ್ದಂತೆ 20 ಅಡಿ ಹೊಂಡ ಸೃಷ್ಟಿ

Updated on: Sep 14, 2024 | 9:55 PM

ರಸ್ತೆಯ ಮಧ್ಯೆ 20 ಅಡಿ ಹೊಂಡ ನಿರ್ಮಾಣಗೊಂಡಿದ್ದರಿಂದ ದಾರಿಹೋಕರು ಆತಂಕಕ್ಕೆ ಒಳಗಾಗಿದ್ದರು. ಸ್ಥಳೀಯರ ಮಾಹಿತಿ ಮೇರೆಗೆ ಜಿಎಚ್‌ಎಂಸಿ ಹಾಗೂ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಹೊಂಡ ನಿರ್ಮಾಣವಾದ ರಸ್ತೆಯಲ್ಲಿ ವಾಹನ ಸಂಚಾರವನ್ನು ತಡೆದರು.

ಹೈದರಾಬಾದ್: ತೆಲಂಗಾಣದ ಮಿಯಾಪುರದ ದೀಪ್ತಿಶ್ರೀ ನಗರ ಕಾಲೋನಿಯಲ್ಲಿ ಇದ್ದಕ್ಕಿದ್ದಂತೆ ರಸ್ತೆ ಕುಸಿದಿದೆ. ರಸ್ತೆಯ ಮಧ್ಯೆ 20 ಅಡಿ ಹೊಂಡ ನಿರ್ಮಾಣವಾಗಿ ಸಂಚಾರ ದಟ್ಟಣೆ ಉಂಟಾಗಿತ್ತು. ವಕ್ರವಾದ ರಸ್ತೆಯ ಪಕ್ಕದಲ್ಲಿ ನೀರಿನ ಪೈಪ್‌ಲೈನ್‌ಗಳು ಮತ್ತು ಒಳಚರಂಡಿ ಪೈಪ್‌ಲೈನ್‌ಗಳಿವೆ. ಸ್ಥಳೀಯರ ಮಾಹಿತಿ ಮೇರೆಗೆ ಜಿಎಚ್‌ಎಂಸಿ ಹಾಗೂ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಹೊಂಡ ನಿರ್ಮಾಣವಾದ ರಸ್ತೆಯಲ್ಲಿ ವಾಹನ ಸಂಚಾರವನ್ನು ತಡೆದರು.

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More