Yatnal rushed to hospital: ವಿಧಾನ ಸಭೆಯಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್, ಬಿಪಿ ಹೊರತು ಯಾವುದೇ ಸಮಸ್ಯೆಯಿಲ್ಲ ಎಂದ ವೈದ್ಯರು

ಅರುಣ್​ ಕುಮಾರ್​ ಬೆಳ್ಳಿ

Updated on: Jul 19, 2023 | 7:26 PM

ಅವರಿಗೆ ಯಾವುದೇ ತೊಂದರೆಯಿಲ್ಲ, ವೈದ್ಯರೊಂದಿಗೆ ಮಾತಾಡುತ್ತಿದ್ದಾರೆ. 24 ಗಂಟೆಗಳ ಕಾಲ ಅಬ್ಸರ್ವೇಶನ್ ನಲ್ಲಿ ಇಡಲಾಗಿದೆ ಎಂದು ಅಲ್ಲಿನ ವೈದ್ಯರೊಬ್ಬರು ಹೇಳಿದ್ದಾರೆ.

ಬೆಂಗಳೂರು: ವಿಧಾನ ಸಭೆಯಲ್ಲಿ ಇಂದು ಗದ್ದಲ, ಆಕ್ರೋಶ, ರೇಗಾಟ-ಚೀರಾಟ-ಹಾರಾಟ, ಮಾತು-ಪ್ರತಿಮಾತು, ಬೈಗುಳ-ಪ್ರತಿಬೈಗುಳ-ಇವೇ ನಡೆದಿದ್ದು. ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ ಬಳಿಕ ಪಕ್ಷದ ನಾಯಕರು ಧರಣಿಗೆ ಕುಳಿತರು. ಏತನ್ಮಧ್ಯೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil atnal) ಸದನದೊಳಗೆ ನಿಗ್ಗಲು ಪ್ರಯತ್ನಿಸಿದರೋ ಅಥವಾ ಬೇರೇನು ಮಾಡಿದರೋ ಅಂತ ಗೊತ್ತಾಗಿಲ್ಲ. ಮಾರ್ಷಲ್ ಗಳ ಎಳೆದಾಟದಲ್ಲಿ ಅವರು ಬಸವಳಿದು ಕುಸಿದು ಬಿದ್ದರು. ಕೂಡಲೇ ವಿಜಯಪುರ ಶಾಸಕರನ್ನು ವ್ಹೀಲ್ ಚೇರ್ ಕೂರಿಸಿ ವಿಧಾನ ಸೌಧ (Vidhana Soudha) ಆವರಣದಲ್ಲಿ ನಿಂತಿದ್ದ ಅಂಬ್ಯುಲೆನ್ಸ್ ವರೆಗೆ ತಳ್ಳಿಕೊಂಡು ಬಂದು ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಲಭ್ಯವಿರುವ ಮಾಹಿತಿ ಪ್ರಕಾರ ಯತ್ನಾಳ್ ಅವರನ್ನು ಫೋರ್ಟೀಸ್ (Fortis Hospital) ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿನ ವೈದ್ಯರ ಪ್ರಕಾರ ಶಾಸಕರ ರಕ್ತದೊತ್ತಡ ಹೆಚ್ಚಾಗಿದೆ ಮತ್ತು ಹ್ರದ್ರೋಗ ತಜ್ಞರು ಇಸಿಜಿ ಮಾಡಿದ್ದು ಅದು ನಾರ್ಮಲ್ ಆಗಿದೆ. ಅವರಿಗೆ ಯಾವುದೇ ತೊಂದರೆಯಿಲ್ಲ, ವೈದ್ಯರೊಂದಿಗೆ ಮಾತಾಡುತ್ತಿದ್ದಾರೆ. 24 ಗಂಟೆಗಳ ಕಾಲ ಅಬ್ಸರ್ವೇಶನ್ ನಲ್ಲಿ ಇಡಲಾಗಿದೆ ಎಂದು ಅಲ್ಲಿನ ವೈದ್ಯರೊಬ್ಬರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.