ಯಡಿಯೂರಪ್ಪನವರ ಕುಟುಂಬ ರಾಜಕಾರಣದಿಂದ ರೋಸಿ ಹೋರಾಟಕ್ಕಿಳಿದಿದ್ದೇನೆ: ಕೆ ಎಸ್ ಈಶ್ವರಪ್ಪ

ಅವರ ಒಬ್ಬ ಮಗ ಸಂಸದನಾಗಿದ್ದಾರೆ ಮತ್ತೊಬ್ಬ ಶಾಸಕನಾಗಿದ್ದಾರೆ ಮತ್ತು ಅವರು ಕೇಂದ್ರ ಚುನಾವಣಾ ಮಂಡಳಿಯ ಸದಸ್ಯರಾಗಿದ್ದಾರೆ. ಅಷ್ಟಾಗಿಯೂ ಅವರು ವಿಧಾನಸಭಾ ಚುನಾವಣೆಯ ಆರು ತಿಂಗಳ ಬಳಿಕ ದೆಹಲಿಗೆ ಹೋಗಿ ತಮ್ಮ ಮಗನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದರು ಎಂದು ಈಶ್ವರಪ್ಪ ಹೇಳಿದರು.

ಯಡಿಯೂರಪ್ಪನವರ ಕುಟುಂಬ ರಾಜಕಾರಣದಿಂದ ರೋಸಿ ಹೋರಾಟಕ್ಕಿಳಿದಿದ್ದೇನೆ: ಕೆ ಎಸ್ ಈಶ್ವರಪ್ಪ
|

Updated on: Mar 21, 2024 | 4:29 PM

ಶಿವಮೊಗ್ಗ: ಬಿಎಎಸ್ ಯಡಿಯೂರಪ್ಪ (BS Yediyurappa) ಮತ್ತು ಅವರ ಕುಟುಂಬದ ವಿರುದ್ಧ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮಗನಿಗೆ ಟಿಕೆಟ್ ಸಿಕ್ಕಿಲ್ಲ ಅಂತ ಮಾತ್ರ ತಾನು ಅಸಮಾಧಾನಗೊಂಡಿಲ್ಲ, ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ (dynastic politics) ವಿರುದ್ಧ ಮತ್ತು ಹಿಂದೂತ್ವ ಉಳಿಸಲು ಹೋರಾಟ ಮಾಡುತ್ತಿರುವುದಾಗಿ ಹೇಳಿದರು. ರಾಷ್ಟ್ರಮಟ್ಟದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪರಿವಾರವಾದವನ್ನು ವಿರೋಧಿಸುವ ಹಾಯೆಯೇ ತಾನು ಕರ್ನಾಟಕದಲ್ಲಿ ಯಡಿಯೂರಪ್ಪರ ಕುಟುಂಬ ವಾದದ ವಿರುದ್ಧ ಸೆಡ್ಡು ಹೊಡೆದಿರುವೆ ಎಂದು ಈಶ್ವರಪ್ಪ ಹೇಳಿದರು. ಅವರ ಒಬ್ಬ ಮಗ ಸಂಸದನಾಗಿದ್ದಾರೆ ಮತ್ತೊಬ್ಬ ಶಾಸಕನಾಗಿದ್ದಾರೆ ಮತ್ತು ಅವರು ಕೇಂದ್ರ ಚುನಾವಣಾ ಮಂಡಳಿಯ ಸದಸ್ಯರಾಗಿದ್ದಾರೆ. ಅಷ್ಟಾಗಿಯೂ ಅವರು ವಿಧಾನಸಭಾ ಚುನಾವಣೆಯ ಆರು ತಿಂಗಳ ಬಳಿಕ ದೆಹಲಿಗೆ ಹೋಗಿ ತಮ್ಮ ಮಗನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದರು ಎಂದು ಈಶ್ವರಪ್ಪ ಹೇಳಿದರು.

ಹಿಂದೂತ್ವವಾದಿಗಳಾಗಿರುವ ಸಿಟಿ ರವಿ, ಪ್ರತಾಪ್ ಸಿಂಹ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸದಾನಂದಗೌಡರನ್ನು ಯಡಿಯೂರಪ್ಪ ಮೂಲೆಗುಂಪು ಮಾಡಿದರು ಎಂದು ಈಶ್ವರಪ್ಪ ಹೇಳಿದರು. ಸದಾನಂದಗೌಡರು ಹೇಳಿರುವ ಹಾಗೆ ರಾಜ್ಯ ಬಿಜೆಪಿಯ ಶುದ್ಧೀಕರಣ ಆಗಬೇಕಿದೆ ಎಂದು ಹೇಳಿದ ಮಾಜಿ ಸಚಿವ ತಾವೆಲ್ಲ ಸೇರಿ ಅದನ್ನು ಮಾಡುತ್ತೇವೆ ಅಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಯಡಿಯೂರಪ್ಪ ಕುಟುಂಬಕ್ಕೆ ಸೆಡ್ಡು ಹೊಡೆದಿರುವಂತಿದೆ ಹಿರಿಯ ನಾಯಕ ಈಶ್ವರಪ್ಪ ಧೋರಣೆ!

Follow us
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ