ನಾನು ವಲಸಿಗನಲ್ಲ, ಕನ್ನಡದ ಮಣ್ಣಲ್ಲಿ ಹುಟ್ಟಿದವನು, ರಾಮನಗರ ಕರ್ಮಭೂಮಿ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 29, 2024 | 5:24 PM

ರಾಮನಗರದಿಂದ ನಾಲ್ಕು ಬಾರಿ ಮತ್ತು ಚನ್ನಪಟ್ಟಣದಿಂದ ಎರಡು ಬಾರಿ ವಿಧಾನಸಭೆಗೆ ಆಯ್ಕೆಯಾದಾಗಲೂ ತಾನು ಪ್ರಚಾರಕ್ಕೆ ಬಂದಿರಲಿಲ್ಲ, ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಪ್ರಚಾರ ಮಾಡಿಲ್ಲ, ಆದರೆ ಕುತಂತ್ರದ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಹೋರಾಡಲು ತಾನು ಈ ಬಾರಿ ಪ್ರಚಾರಕ್ಕೆ ಬಂದಿರುವುದಾಗಿ ಕುಮಾರಸ್ವಾಮಿ ಹೇಳಿದರು.

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಸಿದ್ದೇಗೌಡನದೊಡ್ಡಿಯಲ್ಲಿ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ, ತಾನು ವಲಸಿಗನಲ್ಲ, ಹಾಸನದಲ್ಲಿ ಹುಟ್ಟಿದ್ದರೂ ರಾಜಕಾರಣದ ಬದುಕು ರೂಪುಗೊಂಡಿದ್ದು ರಾಮನಗರ ಜಿಲ್ಲೆಯಲ್ಲಿ, ತನ್ನ ಅಂತ್ಯ ಕೂಡ ಬಿಡದಿ ಹೋಬಳಿಯ ಕೇತನಹಳ್ಳಿಯಲ್ಲಿ ಸಂಭವಿಸಲಿದೆ ಎಂದು ಹೇಳಿದರು. ಇಟಲಿಯಲ್ಲ್ಲಿ ಜನಿಸಿದ ಸೋನಿಯಾ ಗಾಂಧಿ ಮಗಳು ಪ್ರಿಯಾಂಕಾ ಗಾಂಧಿಯನ್ನು ಕೇರಳದ ವಯನಾಡ್ ಕ್ಷೇತ್ರದಿಂದ ಸ್ಪರ್ಧೆಗಿಳಿಸುವ ಕಾಂಗ್ರೆಸ್​ನವರಿಗೆ ತಾನು ರಾಮನಗರದಲ್ಲಿರೋದು ಕಣ್ಣು ಕುಕ್ಕುತ್ತಿದೆಯೇ? ಕನ್ನಡದ ಮಣ್ಣಲ್ಲಿ ಹುಟ್ಟಿದ ತಾನು ರಾಮನಗರಕ್ಕೆ ವಲಸಿಗನಾಗುತ್ತೇನೆಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಅನಿತಾ ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸಲಾಗಿತ್ತು: ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.