AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಮತ್ತು ಹೆಸರುಗಳನ್ನು ಘೋಷಿಸುವ ಅಧಿಕಾರ ನನಗಿಲ್ಲ: ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಮತ್ತು ಹೆಸರುಗಳನ್ನು ಘೋಷಿಸುವ ಅಧಿಕಾರ ನನಗಿಲ್ಲ: ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 11, 2024 | 2:59 PM

ಪಟ್ಟಿಯನ್ನು ತೆಗೆದುಕೊಂಡು ದೆಹಲಿಗೆ ಹೋಗುತ್ತೇವೆ, ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಪರಾಮರ್ಶೆ ನಡೆಸುತ್ತದೆ. ಕೆಪಿಸಿಸಿ ನೀಡಿದ ಪಟ್ಟಿಯನ್ನೇ ಸಿಇಸಿ ಅಂತಿಮಗೊಳಿಸುತ್ತದೆ ಅಂತಿಲ್ಲ, ಅವರು ಕೆಲ ಹೆಸರುಗಳನ್ನು ತೆಗೆದುಹಾಕಿ ತಮಗೆ ಸರಿಯೆನಿಸಿದ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಬಹುದು ಮತ್ತು ಅಂತಿಮ ಪಟ್ಟಿಯನ್ನು ಸಹ ವರಿಷ್ಠರೇ ಘೋಷಣೆ ಮಾಡುತ್ತಾರೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಹೊಸ ಆಸ್ತಿ ತೆರಿಗೆ ಮತ್ತು ಖಾತಾ ವ್ಯವಸ್ಥೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಉಪ ಮುಖ್ಯಮಂತ್ರಿ (DCM) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ (probable candidates) ಬಗ್ಗೆ ಮಾಹಿತಿಯನ್ನು ನೀಡುತ್ತಾ, ಇಂದು ಸಾಯಂಕಾಲ ಕೆಪಿಸಿಸಿ ಸಭೆಯೊಂದನ್ನು ನಡೆಸಿ ಉಳಿದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯೊಂದನ್ನು ತಯಾರು ಮಾಡಲಿದೆ ಎಂದು ಹೇಳಿದರು. ಆದರೆ, ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಅಧಿಕಾರ ತನಗಿಲ್ಲ, ಪಟ್ಟಿಯನ್ನು ತೆಗೆದುಕೊಂಡು ದೆಹಲಿಗೆ ಹೋಗುತ್ತೇವೆ, ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಪರಾಮರ್ಶೆ ನಡೆಸುತ್ತದೆ. ಕೆಪಿಸಿಸಿ ನೀಡಿದ ಪಟ್ಟಿಯನ್ನೇ ಸಿಇಸಿ ಅಂತಿಮಗೊಳಿಸುತ್ತದೆ ಅಂತಿಲ್ಲ, ಅವರು ಕೆಲ ಹೆಸರುಗಳನ್ನು ತೆಗೆದುಹಾಕಿ ತಮಗೆ ಸರಿಯೆನಿಸಿದ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಬಹುದು ಮತ್ತು ಅಂತಿಮ ಪಟ್ಟಿಯನ್ನು ಸಹ ವರಿಷ್ಠರೇ ಘೋಷಣೆ ಮಾಡುತ್ತಾರೆ ಎಂದು ಶಿವಕುಮಾರ್ ಹೇಳಿದರು. ಬಿಜೆಪಿ ಇಂದು ಸಾಯಂಕಾಲ ಪಟ್ಟುಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದಾಗ, ಅವರ ರಾಜಕಾರಣವೇ ಬೇರೆ ಕಾಂಗ್ರೆಸ್ ರಾಜಕಾರಣವೇ ಬೇರೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರಿನ 6,900 ಬೋರ್ ವೆಲ್​ನಲ್ಲಿ ನೀರು ಬರುತ್ತಿಲ್ಲ, ಸ್ಲಂಗಳಿಗೆ ಪೂರೈಕೆ ಮಾಡುವ ನೀರಿಗೂ ದರ ನಿಗದಿ: ಡಿಕೆ ಶಿವಕುಮಾರ್​