ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಮತ್ತು ಹೆಸರುಗಳನ್ನು ಘೋಷಿಸುವ ಅಧಿಕಾರ ನನಗಿಲ್ಲ: ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

Updated on: Mar 11, 2024 | 2:59 PM

ಪಟ್ಟಿಯನ್ನು ತೆಗೆದುಕೊಂಡು ದೆಹಲಿಗೆ ಹೋಗುತ್ತೇವೆ, ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಪರಾಮರ್ಶೆ ನಡೆಸುತ್ತದೆ. ಕೆಪಿಸಿಸಿ ನೀಡಿದ ಪಟ್ಟಿಯನ್ನೇ ಸಿಇಸಿ ಅಂತಿಮಗೊಳಿಸುತ್ತದೆ ಅಂತಿಲ್ಲ, ಅವರು ಕೆಲ ಹೆಸರುಗಳನ್ನು ತೆಗೆದುಹಾಕಿ ತಮಗೆ ಸರಿಯೆನಿಸಿದ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಬಹುದು ಮತ್ತು ಅಂತಿಮ ಪಟ್ಟಿಯನ್ನು ಸಹ ವರಿಷ್ಠರೇ ಘೋಷಣೆ ಮಾಡುತ್ತಾರೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಹೊಸ ಆಸ್ತಿ ತೆರಿಗೆ ಮತ್ತು ಖಾತಾ ವ್ಯವಸ್ಥೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಉಪ ಮುಖ್ಯಮಂತ್ರಿ (DCM) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ (probable candidates) ಬಗ್ಗೆ ಮಾಹಿತಿಯನ್ನು ನೀಡುತ್ತಾ, ಇಂದು ಸಾಯಂಕಾಲ ಕೆಪಿಸಿಸಿ ಸಭೆಯೊಂದನ್ನು ನಡೆಸಿ ಉಳಿದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯೊಂದನ್ನು ತಯಾರು ಮಾಡಲಿದೆ ಎಂದು ಹೇಳಿದರು. ಆದರೆ, ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಅಧಿಕಾರ ತನಗಿಲ್ಲ, ಪಟ್ಟಿಯನ್ನು ತೆಗೆದುಕೊಂಡು ದೆಹಲಿಗೆ ಹೋಗುತ್ತೇವೆ, ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಪರಾಮರ್ಶೆ ನಡೆಸುತ್ತದೆ. ಕೆಪಿಸಿಸಿ ನೀಡಿದ ಪಟ್ಟಿಯನ್ನೇ ಸಿಇಸಿ ಅಂತಿಮಗೊಳಿಸುತ್ತದೆ ಅಂತಿಲ್ಲ, ಅವರು ಕೆಲ ಹೆಸರುಗಳನ್ನು ತೆಗೆದುಹಾಕಿ ತಮಗೆ ಸರಿಯೆನಿಸಿದ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಬಹುದು ಮತ್ತು ಅಂತಿಮ ಪಟ್ಟಿಯನ್ನು ಸಹ ವರಿಷ್ಠರೇ ಘೋಷಣೆ ಮಾಡುತ್ತಾರೆ ಎಂದು ಶಿವಕುಮಾರ್ ಹೇಳಿದರು. ಬಿಜೆಪಿ ಇಂದು ಸಾಯಂಕಾಲ ಪಟ್ಟುಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದಾಗ, ಅವರ ರಾಜಕಾರಣವೇ ಬೇರೆ ಕಾಂಗ್ರೆಸ್ ರಾಜಕಾರಣವೇ ಬೇರೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರಿನ 6,900 ಬೋರ್ ವೆಲ್​ನಲ್ಲಿ ನೀರು ಬರುತ್ತಿಲ್ಲ, ಸ್ಲಂಗಳಿಗೆ ಪೂರೈಕೆ ಮಾಡುವ ನೀರಿಗೂ ದರ ನಿಗದಿ: ಡಿಕೆ ಶಿವಕುಮಾರ್​

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More