AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರದ ಹುಚ್ಚು ನಂಗಿಲ್ಲ, ಏನಾದರೂ ವಿಷಯವಿದ್ದರೆ ನಾನೇ ಮಾಧ್ಯಮಗಳೊಂದಿಗೆ ಮಾತಾಡುತ್ತೇನೆ: ಸಿದ್ದರಾಮಯ್ಯ

ಪ್ರಚಾರದ ಹುಚ್ಚು ನಂಗಿಲ್ಲ, ಏನಾದರೂ ವಿಷಯವಿದ್ದರೆ ನಾನೇ ಮಾಧ್ಯಮಗಳೊಂದಿಗೆ ಮಾತಾಡುತ್ತೇನೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 24, 2025 | 2:55 PM

Share

ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಒಂದಿಬ್ಬರು ಮಂತ್ರಿಗಳು ಸರ್ಕಾರದ ಕಾರ್ಯವೈಖರಿ ಮತ್ತು ಅಧಿಕಾರಗಳ ದರ್ಪದ ಬಗ್ಗೆ ಅಸಮಾಧಾನ ಮತ್ತು ಅಸಹನೆ ವ್ಯಕ್ತಪಡಿಡುತ್ತಿರುವ ಜೊತೆಗೆ ವಿರೋಧ ಪಕ್ಷಗಳು ಎಡೆಬಿಡದೆ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಟೀಕೆಗಳನ್ನು ಮಾಡುತ್ತ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿರೋದು ನಿಸ್ಸಂದೇಹವಾಗಿ ಸಿದ್ದರಾಮಯ್ಯರನ್ನು ದೃತಿಗೆಡಿಸಿದೆ.

ದೆಹಲಿ, ಜೂನ್ 24: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ (Karnataka Bhavan) ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದ ಪ್ರತಿಕ್ರಿಯೆ ವಿಚಿತ್ರವಾಗಿತ್ತು. ಸರ್ ನಿನ್ನೆಯಿಂದ ನೀವು ಮಾಧ್ಯಮಗಳೊಂದಿಗೆ ಮಾತಾಡಿಲ್ಲ ಎಂದು ಪತ್ರಕರ್ತರು ಹೇಳಿದಾಗ, ಸಿದ್ದರಾಮಯ್ಯನವರು ನಂಗೆ ಪ್ರಚಾರದ ಹುಚ್ಚಿಲ್ಲ, ಸುಖಾಸುಮ್ಮನೆ ಮಾಧ್ಯಮಗಳೊಂದಿಗೆ ಮಾತಾಡಲ್ಲ ಎನ್ನುತ್ತಾರೆ. ಕೆಮೆರಾಗಳಿಗೆ ಮುಖ ಕೊಟ್ಟು ಮಾತಾಡದ ಮುಖ್ಯಮಂತ್ರಿಯವರು, ಸಾಯಂಕಾಲ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುವುದಿದೆ, ಅದಾದ ಮೇಲೆ ಮಾತಾಡುತ್ತೆನೆ ಎನ್ನುತ್ತಾ ಲಿಫ್ಟ್ ಕಡೆ ಹೋಗುತ್ತಾರೆ.

ಇದನ್ನೂ ಓದಿ: ರಾಷ್ಟ್ರಪತಿಗಳ ಭೇಟಿಗೆ ದೆಹಲಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೋರಿದ್ದೇನೆ: ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More