ಇನ್ನು ಸುಮ್ಮನಿದ್ದರೆ ನಡೆಯಲ್ಲ, ತುಳಿಯುವ ಪ್ರಯತ್ನ ಮಾಡಿದರೆ ಬೀದಿಗಿಳಿದು ಹೋರಾಟ: ಬಿ ಶ್ರೀರಾಮುಲು

ಅರುಣ್​ ಕುಮಾರ್​ ಬೆಳ್ಳಿ

Updated on: Feb 03, 2025 | 4:40 PM

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಬಗ್ಗೆ ಈಗಾಗಲೇ ಹೇಳಿಯಾಗಿದೆ, ಈಗೇನೂ ಕಾಮೆಂಟ್ ಮಾಡಲ್ಲ, ಆದರೆ ಒಂದು ಮಾತು ಮಾತ್ರ ಸತ್ಯ, ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ರಾಷ್ಟ್ರೀಯ ನಾಯಕರು ಸರಿಮಾಡಬಹುದಾಗಿದೆ, ಅವರು ಮಧ್ಯೆ ಪ್ರವೇಶಿಸುವ ಅವಶ್ಯಕತೆಯಂತೂ ಖಂಡಿತ ಇದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.

ಗದಗ: ಬಿಜೆಪಿ ನಾಯಕ ಬಿ ಶ್ರೀರಾಮುಲು ಗೊಂದಲದಲ್ಲಿರುವಂತಿದೆ. ಒಮ್ಮೆ ಸೌಮ್ಯವಾಗಿ ಮತ್ತೊಮ್ಮೆ ಬಿರುಸಾಗಿ ಮಾತಾಡುತ್ತಾರೆ. ಇವತ್ತು ಗದಗಿನಲ್ಲಿ ಮಾತಾಡಿದ ಅವರು ತಾನಿನ್ನು ಸುಮ್ಮನಿರಲ್ಲ, ತಮ್ಮನ್ನು ತುಳಿಯುವ ಪ್ರಯತ್ನ ಮಾಡಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳುತ್ತಾರೆ. ದೆಹಲಿಗೆ ತೆರಳಿ ಪಕ್ಷದ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲು ತನಗೇನೂ ಪೂರ್ವಾನುಮತಿ ಬೇಕಿಲ್ಲ, ಅಲ್ಲಿಗೆ ಹೋಗಿ ಅವರೊಂದಿಗೆ ಮಾತಾಡುವ ಸಂದರ್ಭ ಸೃಷ್ಟಿಯಾಗಿದೆ, ಪಕ್ಷದ ಇಮೇಜಿಗೆ ಧಕ್ಕೆಯಾಗಬಾರದು ಅಂತ ಇಷ್ಟು ದಿನ ಮಾತಾಡದೆ ಸುಮ್ಮನಿದ್ದೆ, ಅದರೆ ಸುಮ್ಮನಿದ್ದರೆ ಸರಿಹೋಗಲ್ಲ ಅಂತ ಮನದಟ್ಟಾಗಿದೆ ಎಂದು ಶ್ರೀರಾಮುಲು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ತಾನೂ ಒಬ್ಬ ಆಕಾಂಕ್ಷಿ ಅಂತ ಖಚಿತಪಡಿಸಿದ ಬಿ ಶ್ರೀರಾಮುಲು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.