Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ, 7 ಬಾರಿ ಚುನಾವಣೆ ಗೆದ್ದಿದ್ದೇನೆ; ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ, 7 ಬಾರಿ ಚುನಾವಣೆ ಗೆದ್ದಿದ್ದೇನೆ; ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

ಸುಷ್ಮಾ ಚಕ್ರೆ
|

Updated on: Mar 19, 2025 | 10:06 PM

ರಾಜ್ಯಸಭೆಯಲ್ಲಿ ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಅವರು ಸಿಬಿಐ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ ಚರ್ಚೆ ಬಿಸಿಯಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಬಿಐ ಗೃಹ ಸಚಿವಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಸಿಬಿಐ 6,900 ಭ್ರಷ್ಟಾಚಾರ ಪ್ರಕರಣಗಳನ್ನು ದಾಖಲಿಸಿದೆ, 361 ಪ್ರಕರಣಗಳು 20 ವರ್ಷಗಳಿಗೂ ಹೆಚ್ಚು ಕಾಲ ಬಾಕಿ ಉಳಿದಿವೆ ಎಂದು ಗೋಖಲೆ ಆರೋಪಿಸಿದರು. ಅವರ ಹೇಳಿಕೆಗಳು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಬಿಸಿ ಮಾತುಗಳನ್ನು ವಿನಿಮಯ ಮಾಡಿಕೊಂಡಾಗ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ನವದೆಹಲಿ, ಮಾರ್ಚ್ 19: ನಾನು ಯಾರ ದಯೆಯಿಂದಲೂ ಇಲ್ಲಿ ಬಂದಿಲ್ಲ. ಏಳು ಬಾರಿ ಚುನಾವಣೆಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಗಳಿಸಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಸಭೆ ಅಧಿವೇಶನದಲ್ಲಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತ ಚರ್ಚೆಯ ಸಂದರ್ಭದಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಅವರು ಸಿಬಿಐ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ ಬಿಸಿ ಚರ್ಚೆ ನಡೆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಬಿಐ ಗೃಹ ಸಚಿವಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಸಾಕೇತ್ ಗೋಖಲೆ ಅವರ ಬಗ್ಗೆ ವೈಯಕ್ತಿಕ ಹೇಳಿಕೆ ನೀಡಿದಾಗ ಅಮಿತ್ ಶಾ “ನಾನು ಯಾರ ದಯೆಯಿಂದ ಅಥವಾ ಯಾವುದೇ ಸಿದ್ಧಾಂತವನ್ನು ವಿರೋಧಿಸಿ ಇಲ್ಲಿಗೆ ಬಂದಿಲ್ಲ. ಭಯಪಡುವ ಪ್ರಶ್ನೆಯೇ ಇಲ್ಲ. ನಾನು 7 ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ” ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ