‘ನಾನು ದೈವವನ್ನು ನಂಬುವವನು, ದೈವಕ್ಕೆ ಅಪಚಾರ ಆಗಿಲ್ಲ’; ರಿಷಬ್ ಶೆಟ್ಟಿ

Updated on: Oct 16, 2025 | 11:33 AM

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಶೆಟ್ಟಿ ನಟಿಸಿ ಗೆದ್ದಿದ್ದಾರೆ. ಈ ಚಿತ್ರದಿಂದ ದೈವಕ್ಕೆ ಅಪಚಾರ ಆಗಿದೆ ಎಂದು ಆರೋಪಿಸಲಾಗಿತ್ತು. ಈ ವಿಚಾರಕ್ಕೆ ರಿಷಬ್ ಶೆಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ದೈವದಿಂದ ನಮಗೆ ಅಪಚಾರ ಆಗಿಲ್ಲ’ ಎಂದು ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ದೈವಕ್ಕೆ ಅಪಚಾರ ಆಗಿದೆ ಎಂಬ ಮಾತಿತ್ತು. ಈ ಬಗ್ಗೆ ರಿಷಬ್ (Rishab Shetty) ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ದೈವವನ್ನು ನಂಬುತ್ತೇನೆ. ಎಲ್ಲಿಯೂ ತಪ್ಪು ಆಗದಂತೆ ಸಿನಿಮಾ ಮಾಡಿದ್ದೇವೆ. ಹಿರಿಯ ಮಾರ್ಗದರ್ಶನದಲ್ಲೇ ಸಿನಿಮಾ ಸಿದ್ಧವಾಗಿದೆ. ಹೇಳುವವರು ಹೇಳುತ್ತಾರೆ. ಅದು ಅವರ ದೃಷ್ಟಿಕೋನ. ನಾವು ಅಂದುಕೊಡಂತೆ ಸಿನಿಮಾ ತಂದಿದ್ದೇವೆ’ ಎಂದು ರಿಷಬ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 16, 2025 11:27 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More