AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ

‘ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ

ಶಿವಕುಮಾರ್ ಪತ್ತಾರ್
| Edited By: |

Updated on: Jul 23, 2026 | 10:05 AM

Share

ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಕೊಪ್ಪಳದ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎರಡು ಸೋಲುಗಳಿಗೆ ಸ್ಥಳೀಯ ಕಾಂಗ್ರೆಸ್ ನಾಯಕರೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ನಂಬಿ ಪಕ್ಷದಲ್ಲಿರುವುದಾಗಿ ಸ್ಪಷ್ಟಪಡಿಸಿರುವ ಅನ್ಸಾರಿ, ತಮಗೆ ಕಾಂಗ್ರೆಸ್​ನವರನ್ನು ಸೋಲಿಸುವುದು ಎರಡು ಸೆಕೆಂಡ್‌ಗಳ ಕೆಲಸ ಎಂದು ಹೇಳಿದ್ದಾರೆ. ಜೆಡಿಎಸ್ ಅಥವಾ ಬಿಜೆಪಿ ಸೇರುವ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ಕೊಪ್ಪಳ, ಜುಲೈ 23: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎರಡು ಸೋಲುಗಳಿಗೆ ಕೊಪ್ಪಳ, ಕನಕಗಿರಿ ಮತ್ತು ಯಲಬುರ್ಗಾ ಭಾಗದ ಸ್ಥಳೀಯ ಕಾಂಗ್ರೆಸ್ ನಾಯಕರೇ ಕಾರಣ ಎಂದು ಅನ್ಸಾರಿ ಆರೋಪಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಂಬಿ ತಾವು ಕಾಂಗ್ರೆಸ್ ಸೇರಿರುವುದಾಗಿ ಸ್ಪಷ್ಟಪಡಿಸಿದ ಅನ್ಸಾರಿ, ಎರಡು ಬಾರಿ ಟಿಕೆಟ್ ನೀಡಿದರೂ, ಸ್ಥಳೀಯ ನಾಯಕರು ತಮ್ಮನ್ನು ಸೋಲಿಸಲು ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ತಮಗೆ ಅವರನ್ನು ಸೋಲಿಸುವುದು ಕೇವಲ ಎರಡು ಸೆಕೆಂಡ್‌ಗಳ ಕೆಲಸ ಎಂದು ಹೇಳಿರುವ ಇಕ್ಬಾಲ್ ಅನ್ಸಾರಿ, ಶುಕ್ರವಾರದ ವೇಳೆ ಮಸೀದಿಗೆ ಒಂದು ಪತ್ರ ಬರೆದು ಮನವಿ ಮಾಡಿದರೆ ಸಾಕು ಕಾಂಗ್ರೆಸ್ಸನ್ನು ಸೋಲಿಸಬಹುದು. ಆದರೆ ತಾನು ದೈವ ಭಕ್ತನಾಗಿರುವುದರಿಂದ ಮೋಸ ಮಾಡಲು ಇಚ್ಛಿಸುವುದಿಲ್ಲ ಎಂದಿದ್ದಾರೆ. ಜೆಡಿಎಸ್ ಅಥವಾ ಬಿಜೆಪಿ ಸೇರುವ ವದಂತಿಗಳು ಹರಡುತ್ತಿದ್ದು, ಇದು ಗಾಳಿಸುದ್ದಿ ಎಂದು ಅವರು ತಳ್ಳಿಹಾಕಿದ್ದಾರೆ. ತಾವು ಈಗಲೂ ಕಾಂಗ್ರೆಸ್‌ನಲ್ಲಿಯೇ ಇದ್ದು, ಸತ್ಯಾಸತ್ಯತೆಯನ್ನು ಜನರು ತಿಳಿದುಕೊಳ್ಳಬೇಕು ಎಂದು ಅನ್ಸಾರಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us