ಕುವೆಂಪು ಹೆಸರು ಹೇಳಿಕೊಂಡು ಭಗವಾನ್ ಮಾತಾಡೋದು ಬೇಡ, ನೇರವಾಗಿ ಮಾತಾಡಿ ನಂತರ ಸಿಗುವ ಮನರಂಜನೆ ಅನುಭವಿಸಲಿ: ಸಿಎನ್ ಅಶ್ವಥ್ ನಾರಾಯಣ

ಭಗವಾನ್ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿ, ಅವರಿಗೆ ಒಕ್ಕಲಿಗ ಸಮುದಾಯದ ಬಗ್ಗೆ ಗೊತ್ತಿರೋದಾದರೂ ಏನು? ಪ್ರತಿದಿನ ಪೂಜೆ ಪುನಸ್ಕಾರಗಳನ್ನು ಮಾಡುತ್ತಾ, ನಾಡಿನ ಸಂಸ್ಕೃತಿ ಹಾಗೂ ಪ್ರಕೃತಿಯನ್ನು ಗೌರವಿಸುತ್ತಾ ಅರ್ಥಪೂರ್ಣವಾಗಿ ಬದುಕು ನಡೆಸುತ್ತಿರುವ ಸಮುದಾಯ ಒಕ್ಕಲಿಗರದ್ದು ಎಂದ ಮಾಜಿ ಸಚಿವ ಹೇಳಿದರು.

ಕುವೆಂಪು ಹೆಸರು ಹೇಳಿಕೊಂಡು ಭಗವಾನ್ ಮಾತಾಡೋದು ಬೇಡ, ನೇರವಾಗಿ ಮಾತಾಡಿ ನಂತರ ಸಿಗುವ ಮನರಂಜನೆ ಅನುಭವಿಸಲಿ: ಸಿಎನ್ ಅಶ್ವಥ್ ನಾರಾಯಣ
|

Updated on: Oct 14, 2023 | 1:32 PM

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಎಗ ಮಾತಾಡಿದ ಬಿಜೆಪಿ ನಾಯಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಮೈಸೂರಲ್ಲಿ ಮಹಿಷ ಉತ್ಸವ (Mahisha Utsav) ಆಚರಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಮಹಿಷ ಉತ್ಸವ ಮಾಡೋದೇ ಇವರ ಉದ್ದೇಶವಾಗಿದ್ದರೆ, ನಾಡದೇವತೆ ಚಾಮುಂಡೇಶ್ವರಿಗೆ ಯಾಕೆ ಪೂಜೆ ಸಲ್ಲಿಸುತ್ತಾರೆ ಎಂದು ಅವರು ಪ್ರಶ್ನಿಸಿದರು. ನಂತರ ನಿನ್ನೆ ಮಹಿಷ ಉತ್ಸವದಲ್ಲಿ ಒಕ್ಕಲಿಗರು ಸಂಸ್ಕೃತಿಹೀನರು ಅಂತ ಪ್ರೊ ಕೆಎಸ್ ಭಗವಾನ್ (Prof. KS Bhagawan) ಅವರನ್ನು ಆಶ್ವಥ್ ನಾರಾಯಣ ಬಲವಾಗಿ ಖಂಡಿಸಿದರು. ಭಗವಾನ್ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿ, ಅವರಿಗೆ ಒಕ್ಕಲಿಗ ಸಮುದಾಯದ ಬಗ್ಗೆ ಗೊತ್ತಿರೋದಾದರೂ ಏನು? ಪ್ರತಿದಿನ ಪೂಜೆ ಪುನಸ್ಕಾರಗಳನ್ನು ಮಾಡುತ್ತಾ, ನಾಡಿನ ಸಂಸ್ಕೃತಿ ಹಾಗೂ ಪ್ರಕೃತಿಯನ್ನು ಗೌರವಿಸುತ್ತಾ ಅರ್ಥಪೂರ್ಣವಾಗಿ ಬದುಕು ನಡೆಸುತ್ತಿರುವ ಸಮುದಾಯ ಒಕ್ಕಲಿಗರದ್ದು ಎಂದ ಮಾಜಿ ಸಚಿವ, ಭಗವಾನ್ ಕುವೆಂಪು ಹೆಸರು ಹೇಳಿಕೊಂಡು ಮಾತಾಡೋದು ಬೇಡ, ಮಾತಾಡೋದಿದ್ದರೆ ನೇರವಾಗಿ ಮಾತಾಡಲಿ, ಮಾತಾಡಿದ ಬಳಿಕ ಸಿಗಲಿರುವ ಮನರಂಜನೆಯನ್ನು ನೋಡಲಿ ಅಂತ ಕೋಪದಿಂದ ಭುಸುಗುಡುತ್ತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ