ಗ್ಯಾರಂಟಿಗಳ ಜಾರಿಗೆ ತಗಲುವ ವೆಚ್ಚವನ್ನು ಹೇಗೆ ಕ್ರೋಢೀಕರಿಸುತ್ತಾರೆ ಅಂತ ಮೇಧಾವಿ ಸಿದ್ದರಾಮಯ್ಯ ಹೇಳಲಿ: ಪ್ರತಾಪ್ ಸಿಂಹ

ಅಪ್ರಬುದ್ಧ ರಾಜಕಾರಣಿಯಾಗೇ ಸಿದ್ದರಾಮಯ್ಯನವರಿಗೆ ಒಂದು ಪ್ರಶ್ನೆ ಕೇಳ್ತೀನಿ ಅವರು ಉತ್ತರಿಸಲಿ ಎಂದು ಪ್ರತಾಪ್ ಸಿಂಹ ಹೇಳಿದರು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರಕರ್ತರೊಂದಿಗೆ ಮಾತಾಡುವಾಗ ಸಂಸದ ಪ್ರತಾಪ್ ಸಿಂಹರನ್ನು (Pratap Simha) ಎಳಸು, ಅಪ್ರಬುದ್ಧ ಅಂತ ಹೇಳಿದ್ದಕ್ಕೆ ಸಂಸದ ಇಂದು ಮೈಸೂರಲ್ಲಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ವಿಶ್ವದ ಅತಿ ದೊಡ್ಡ ಅರ್ಥಶಾಸ್ತ್ರಜ್ಞ (economist), ಮೇಧಾವಿ, ಹಲವಾರು ಬಾರಿ ಬಜೆಟ್ ಮಂಡಿಸಿರುವ ಖ್ಯಾತಿ ಉಳ್ಳವರಾಗಿದ್ದಾರೆ, ನಾನೊಬ್ಬ ಎಳಸು, ಮಗು ಅಥವಾ ಅಪ್ರಬುದ್ಧ ರಾಜಕಾರಣಿಯಾಗೇ ಅವರಿಗೊಂದು ಪ್ರಶ್ನೆ ಕೇಳ್ತೀನಿ; 5 ಗ್ಯಾರಂಟಿಗಳನ್ನು ಜಾರಿಗೆ ತರಲು ರೂ. 59,000 ಕೋಟಿ ಹಣ ಬೇಕಾಗುತ್ತದೆ ಅಂತ ಅವರೇ ಹೇಳಿದ್ದಾರೆ, ಆ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಅಂತ ನನ್ನಂಥ ಅಲ್ಪಜ್ಞಾನಿಗೆ ತಿಳಿಸಿ ಕೃತಾರ್ಥರಾಗಲಿ ಅಂತ ವ್ಯಂಗ್ಯಭರಿತ ಧಾಟಿಯಲ್ಲಿ ಕೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us