AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದು ನಿಜ ಅದರೆ ಬೇರೆಯವರ ಬಗ್ಗೆ ಅಪಪ್ರಚಾರ ಮಾಡಿಲ್ಲ: ಶಿವರಾಜಕುಮಾರ್, ನಟ

Karnataka Assembly Polls; ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದು ನಿಜ ಅದರೆ ಬೇರೆಯವರ ಬಗ್ಗೆ ಅಪಪ್ರಚಾರ ಮಾಡಿಲ್ಲ: ಶಿವರಾಜಕುಮಾರ್, ನಟ

ಅರುಣ್​ ಕುಮಾರ್​ ಬೆಳ್ಳಿ
|

Updated on: May 05, 2023 | 11:36 AM

ಸೋಮಣ್ಣ ಮತ್ತು ಪ್ರತಾಪ್ ಇಬ್ಬರೂ ತನಗೆ ಆತ್ಮೀಯರೆಂದು ಹೇಳಿದ ಶಿವರಾಜ್ ಕುಮಾರ್ ಎಲ್ಲ ರಾಜಕೀಯ ಪಕ್ಷಗಳಲ್ಲೂ ತನಗೆ ಬೇಕಾದವರಿದ್ದಾರೆ ಎಂದರು.

ಶಿವಮೊಗ್ಗ: ಚಿತ್ರನಟ ಶಿವರಾಜ್ ಕುಮಾರ್ (Shivarajkumar) ನಿನ್ನೆ ವರುಣಾದಲ್ಲಿ ಸಿದ್ದರಾಮಯ್ಯನವರ (Siddaramaiah) ಪರ ಪ್ರಚಾರ ಮಾಡಿದ್ದು ವಿ ಸೋಮಣ್ಣ (V Somanna ) ಮತ್ತು ಸಂಸದ ಪ್ರತಾಪ್ ಸಿಂಹ ಅವರಿಗೆ ಇರುಸು ಮುರುಸು ಉಂಟು ಮಾಡಿದೆ. ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ತಾನು ರೂ. 60 ಕೋಟಿ ಆಸ್ಪತ್ರೆ ಕಟ್ಟಿಸಿದ್ದರೂ ಶಿವರಾಜ್ ಕುಮಾರ್ ಅದನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ಸೋಮಣ್ಣ ಬಹಿರಂಗವಾಗೇ ಅಸಮಾಧಾನ ವ್ಯಕ್ತಪಡಿಸಿದ್ದರು. ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಶಿವರಾಜಕುಮಾರ್ ಕೆಲವು ಸ್ಪಷ್ಟೀಕರಣಗಳನ್ನು ನೀಡಿದರು. ಸೋಮಣ್ಣ ಮತ್ತು ಪ್ರತಾಪ್ ಇಬ್ಬರೂ ತನಗೆ ಆತ್ಮೀಯರೆಂದು ಹೇಳಿದ ಅವರು ಎಲ್ಲ ರಾಜಕೀಯ ಪಕ್ಷಗಳಲ್ಲೂ ತನಗೆ ಬೇಕಾದವರಿದ್ದಾರೆ ಎಂದರು. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸುತ್ತಿರುವ ವಿಚಾರ ತನಗೆ ಗೊತ್ತಿರಲಿಲ್ಲ ಎಂದು ಅವರು. ತಾನು ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದು ನಿಜ ಆದರೆ ಬೇರೆಯವರ ಬಗ್ಗೆ ಅಪಪ್ರಚಾರ ಮಾಡಿಲ್ಲ ಎಂದು ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ