Karnataka Assembly Polls; ಕುಮಾರಸ್ವಾಮಿಯವರಂತೆ ಅಳುವ, ಡ್ರಾಮಾ ಮಾಡುವ ಅಗತ್ಯ ನನಗಿಲ್ಲ: ಜಿ ಪರಮೇಶ್ವರ

ಅರುಣ್​ ಕುಮಾರ್​ ಬೆಳ್ಳಿ

Updated on: Apr 29, 2023 | 7:02 PM

ಕಲ್ಲೇಟು ತಿಂದು ನೋವು ಅನುಭವಿಸುತ್ತಿರುವವನು ನಾನು. ನನಗೆ ಡ್ರಾಮಾ ಮಾಡುವ ಅವಶ್ಯಕತೆಯಿಲ್ಲ,’ ಎಂದು ಹೇಳಿದರು.

ತುಮಕೂರು: ನಿನ್ನೆ ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುವಾಗ ಕಲ್ಲೇಟು ತಿಂದು ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದು ಇಂದು ಡಿಸ್ಚಾರ್ಜ್ ಅಗಿ ಮನೆಗೆ ವಾಪಸ್ಸಾಗಿರುವ ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ (G Parameshwara) ತಲೆಗೆ ಬ್ಯಾಂಡೇಜ್ ಸುತ್ತಿದ ಸ್ಥಿತಿಯಲ್ಲೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ ತಮ್ಮ ಗಾಯದ ಬಗ್ಗೆ ವಿವರಣೆ ನೀಡಿದರು. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy ), ಗಾಯವೇನೂ ಇಲ್ಲ, ಮತದಾರರ ಸಹಾನುಭೂತಿ (sympathy) ಗಿಟ್ಟಿಸಲು ಡ್ರಾಮಾ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ ಅಂತ ಪತ್ರಕರ್ತರೊಬ್ಬರು ಅವರ ಗಮನಕ್ಕೆ ತಂದಾಗ, ‘ಡ್ರಾಮಾ ಮಾಡೋದು ಜನರ ಮುಂದೆ ಅಳೋದು ಅವರಿಗೆ ಅಭ್ಯಾಸವಿರಬಹುದು, ಕಲ್ಲೇಟು ತಿಂದು ನೋವು ಅನುಭವಿಸುತ್ತಿರುವವನು ನಾನು. ನನಗೆ ಡ್ರಾಮಾ ಮಾಡುವ ಅವಶ್ಯಕತೆಯಿಲ್ಲ,’ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.