DKS Vs HDK; ಕುಮಾರಸ್ವಾಮಿ ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ: ಡಿಕೆ ಶಿವಕುಮಾರ್, ಉಪ ಮುಖ್ಯಮಂತ್ರಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2023 | 3:48 PM

ಹಿಂದೆ ರಾಷ್ಟ್ರಪತಿಗಳ ಚುನಾವಣೆ ನಡೆದಾಗ ಅವರ ಜೆಡಿಎಸ್ ಪಕ್ಷ ಮತದಾನವನ್ನು ಬಹಿಷ್ಕರಿಸಿತ್ತು ಎಂದು ಶಿವಕುಮಾರ್ ಹೇಳಿದರು.

ದೆಹಲಿ: ಇತ್ತ ಬೆಂಗಳೂರಲ್ಲಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಪದೇಪದೆ ಟೀಕಿಸುತ್ತಿದ್ದರೆ, ದೆಹಲಿಯಲ್ಲಿ ಉಪ ಮುಖ್ಯಮಂತ್ರಿಗಳು ಇಂಗ್ಲಿಷ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಹೇಳುತ್ತಿರುವುದಕ್ಕೆ ತಾನು ಕಾಮೆಂಟ್ ಮಾಡಲಿಚ್ಛಿಸುವುದಿಲ್ಲ ಎಂದು ಹೇಳುವ ಶಿವಕುಮಾರ್, ರಾಷ್ಟ್ರಪತಿಗಳ ಚುನಾವಣೆ ನಡೆದಾಗ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಳಿಳಿಸಿದ್ದ ಬಗ್ಗೆ ಕುಮಾರಸ್ವಾಮಿ ಮಾಡಿರುವ ಟೀಕೆಗೆ, ಅವರು ಒಂದು ಸಂಗತಿಯನ್ನು ಮರೆತಂತಿದೆ, ಹಿಂದೆ ರಾಷ್ಟ್ರಪತಿಗಳ ಚುನಾವಣೆ ನಡೆದಾಗ ಅವರ ಜೆಡಿಎಸ್ ಪಕ್ಷ ಮತದಾನವನ್ನು ಬಹಿಷ್ಕರಿಸಿತ್ತು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.