ತಾಕತ್ತು, ದಮ್ಮು ಪದಗಳನ್ನು ಬಳಸುವ ಶೋಭಾ ಕರಂದ್ಲಾಜೆ ಮಾತಿಗೆ ಪ್ರತಿಕ್ರಿಯಿಸುವುದಿಲ್ಲ: ಭೈರತಿ ಸುರೇಶ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 28, 2024 | 12:37 PM

ಹಿಂದೆ ಕೇಂದ್ರದಲ್ಲಿ ಇಂಧನ ಸಚಿವರಾಗಿದ್ದಾಗ ಶೋಭಾ ಕರಂದ್ಲಾಜೆಯವರು ಭಾರೀ ಅಕ್ರಮಗಳನ್ನೆಸಗಿದ್ದಾರೆ ಅವರು ನಡೆಸಿದ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ ಎಂದು ಸುರೇಶ್ ಹೇಳಿದ್ದಕ್ಕೆ ಶೋಭಾ ಅವರು, ತಾನು ಯಾವುದೇ ಅಕ್ರಮ ನಡೆಸಿಲ್ಲ, ತಾಕತ್ತಿದ್ದರೆ ಸುರೇಶ್ ದಾಖಲೆ ಬಿಡುಗಡೆ ಮಾಡಲಿ ಅಂತ ಹೇಳಿದ್ದರು.

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕರ್ನಾಟಕ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನಡುವೆ ವಾಗ್ದ್ದಾಳಿ ಮುಂದುವರಿದಿದೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸುರೇಶ್, ಶೋಭಾ ಅವರು ತಾಕತ್ತು, ದಮ್ಮು ಅಂತ ಮಾತಾಡುತ್ತಿದ್ದಾರೆ, ಭಾರತದ ಮಹಿಳೆಯರು ಅಂಥ ಭಾಷೆ ಮಾತಾಡಲ್ಲ, ನಮ್ಮ ಹಳ್ಳಿಗಳಲ್ಲೂ ಮಹಿಖೆಯರು ಹಾಗೆ ಮಾತಾಡಲ್ಲ, ಸುಸಂಸ್ಕೃತ ಭಾಷೆಯಲ್ಲಿ ಮಾತಾಡುವವರಿಗೆ ಮಾತ್ರ ತಾನು ಉತ್ತರ ಕೋಡೋದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಡಾ ಟೆನ್ಷನ್ ನಡುವೆಯೂ ಸಚಿವ ಭೈರತಿ ಸುರೇಶ್ ಭರ್ಜರಿ ಸ್ಟೆಪ್ಸ್

Published on: Oct 28, 2024 12:36 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.