ನನ್ನನ್ನು ಹಾಗೂ ಪಕ್ಷವನ್ನು ಕೈಬಿಡದಂತೆ ವೀರಶೈವ ಲಿಂಗಾಯತ ಸಮುದಾಯವನ್ನು ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ: ಬಿಎಸ್ ಯಡಿಯೂರಪ್ಪ
ಹಾಗೇನೂ ಆಗದು, ಹಿಂದೆ ಸಮುದಾಯವರು ತಮ್ಮನ್ನು ಬೆಂಬಲಿಸಿದ ಹಾಗೆ ಮುಂದೆಯೂ ಬಿಜೆಪಿಯನ್ನು ಬೆಂಬಲಿಸುವಂತೆ ವಿನಂತಿಸಿಕೊಳ್ಳುವುದಾಗಿ ಬಿಎಸ್ವೈ ಹೇಳಿದರು.
ಬೆಂಗಳೂರು: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಪಕ್ಷದ ಸಂಘಟನೆಗಾಗಿ ರಾಜ್ಯದ ಉದ್ದಗಲಕ್ಕೆ ಓಡಾಡಿ ಪಕ್ಷ ಸಂಘಟಿಸುವ ಮತ್ತು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಮಾತನ್ನು ಪುನರಾವರ್ತಿಸಿದರು. ಬೆಂಗಳೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸೋಮವಾರ ತಮ್ಮ ಹುಟ್ಟುಹಬ್ಬ ಮತ್ತು ಅಂದೇ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಆಗಮಿಸಲಿದ್ದಾರೆ ಎಂದು ಹೇಳಿದರು. ವೀರಶೈವ ಲಿಂಗಾಯತ (Veerashaiva Lingayat) ಮತಗಳು ಕೈತಪ್ಪುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಗಳು, ಹಾಗೇನೂ ಆಗದು, ಹಿಂದೆ ಸಮುದಾಯವರು ತಮ್ಮನ್ನು ಬೆಂಬಲಿಸಿದ ಹಾಗೆ ಮುಂದೆಯೂ ಬಿಜೆಪಿಯನ್ನು ಬೆಂಬಲಿಸುವಂತೆ ವಿನಂತಿಸಿಕೊಳ್ಳುವುದಾಗಿ ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

