AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಹಾಗೂ ಪಕ್ಷವನ್ನು ಕೈಬಿಡದಂತೆ ವೀರಶೈವ ಲಿಂಗಾಯತ ಸಮುದಾಯವನ್ನು ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ: ಬಿಎಸ್ ಯಡಿಯೂರಪ್ಪ

ನನ್ನನ್ನು ಹಾಗೂ ಪಕ್ಷವನ್ನು ಕೈಬಿಡದಂತೆ ವೀರಶೈವ ಲಿಂಗಾಯತ ಸಮುದಾಯವನ್ನು ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 25, 2023 | 2:36 PM

Share

ಹಾಗೇನೂ ಆಗದು, ಹಿಂದೆ ಸಮುದಾಯವರು ತಮ್ಮನ್ನು ಬೆಂಬಲಿಸಿದ ಹಾಗೆ ಮುಂದೆಯೂ ಬಿಜೆಪಿಯನ್ನು ಬೆಂಬಲಿಸುವಂತೆ ವಿನಂತಿಸಿಕೊಳ್ಳುವುದಾಗಿ ಬಿಎಸ್​ವೈ ಹೇಳಿದರು.

ಬೆಂಗಳೂರು: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಪಕ್ಷದ ಸಂಘಟನೆಗಾಗಿ ರಾಜ್ಯದ ಉದ್ದಗಲಕ್ಕೆ ಓಡಾಡಿ ಪಕ್ಷ ಸಂಘಟಿಸುವ ಮತ್ತು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಮಾತನ್ನು ಪುನರಾವರ್ತಿಸಿದರು. ಬೆಂಗಳೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸೋಮವಾರ ತಮ್ಮ ಹುಟ್ಟುಹಬ್ಬ ಮತ್ತು ಅಂದೇ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಆಗಮಿಸಲಿದ್ದಾರೆ ಎಂದು ಹೇಳಿದರು. ವೀರಶೈವ ಲಿಂಗಾಯತ (Veerashaiva Lingayat) ಮತಗಳು ಕೈತಪ್ಪುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಗಳು, ಹಾಗೇನೂ ಆಗದು, ಹಿಂದೆ ಸಮುದಾಯವರು ತಮ್ಮನ್ನು ಬೆಂಬಲಿಸಿದ ಹಾಗೆ ಮುಂದೆಯೂ ಬಿಜೆಪಿಯನ್ನು ಬೆಂಬಲಿಸುವಂತೆ ವಿನಂತಿಸಿಕೊಳ್ಳುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.