AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಜೊತೆ ರಾಜಕೀಯೇತರ ಸಂಬಂಧವಿದೆ, ಪ್ರತಿಸಲ ಆತ್ಮೀಯತೆಯಿಂದ ಮಾತಾಡುತ್ತಾರೆ: ರೇಣುಕಾಚಾರ್ಯ

ಶಿವಕುಮಾರ್ ಜೊತೆ ರಾಜಕೀಯೇತರ ಸಂಬಂಧವಿದೆ, ಪ್ರತಿಸಲ ಆತ್ಮೀಯತೆಯಿಂದ ಮಾತಾಡುತ್ತಾರೆ: ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 14, 2025 | 2:39 PM

Share

ಡಿಸಿಎಂ ಡಿಕೆ ಶಿವಕುಮಾರ್ ಜೊತೆ ರಾಜಕೀಯಕ್ಕೆ ಮಿಗಿಲಾದ ಸಂಬಂಧವಿದೆ, ಕರೆ ಮಾಡಿದಾಗೆಲ್ಲ ಸ್ವೀಕರಿಸಿ ಅತ್ಮೀಯವಾಗಿ ಮಾತಾಡುತ್ತಾರೆ, ಇವತ್ತು ಕೂಡ ತನ್ನ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ರೇಣುಕಾಚಾರ್ಯ ಹೇಳಿದರು. ಅದರೆ ಅವರು ಶಿವಕುಮಾರ್​​ರನ್ನು ಭೇಟಿಯಾದಾಗಲೆಲ್ಲ ಬಿಜೆಪಿ ತೊರೆಯಲಿದ್ದಾರೆಯೇ ಎಂಬ ಗುಮಾನಿ ಹುಟ್ಟಿಕೊಳ್ಳುತ್ತದೆ.

ಬೆಂಗಳೂರು, 14 ಮಾರ್ಚ್: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಿ ಕ್ಷೇತ್ರದಲ್ಲಿ ನಿಂತುಹೋಗಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಸುಮಾರು 150 ಕೊಳವೆಬಾವಿಗಳು ಮತ್ತು ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶುರುವಾದ ಹೊನ್ನಾಳಿ-ನ್ಯಾಮತಿ ಕ್ಷೇತ್ರದಲ್ಲಿರುವ ಕೆರೆತುಂಬಿಸುವ ಕೆಲಸ ನೆನೆಗುದಿಗೆ ಬಿದ್ದಿದೆ, ಅವುಗಳನ್ನು ಪೂರ್ಣಗಳಿಸಲು ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದ್ದಾಗಿ ರೇಣುಕಾಚಾರ್ಯ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ: ಡಿಕೆ ಶಿವಕುಮಾರ್ ಆಯೋಜಿಸಿದ ಔತಣಕೂಟದಲ್ಲಿ ಇಬ್ಬರು ಬಿಜೆಪಿ ಶಾಸಕರು

Published on: Mar 14, 2025 02:38 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.