ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ: ರೇಣುಕಾಸ್ವಾಮಿ ತಂದೆ ಬೇಸರ

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿ ಜೈಲು ಸೇರಿರುವ ದರ್ಶನ್ ಕೂಡ ಇದೇ ಕಾರಾಗೃಹದಲ್ಲಿದ್ದಾರೆ. ಇದೀಗ ದರ್ಶನ್ ಜೈಲಿನಲ್ಲಿ ಕಾಫಿ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್​ ಆಗಿದೆ. ಫೋಟೋ ನೋಡಿದ ಮೃತ ರೇಣುಕಾಸ್ವಾಮಿ ಕುಟುಂಬ, ಜೈಲಧಿಕಾರಿಗಳ ವಿರುದ್ಧ ಕಿಡಿಕಾರಿದೆ. ಸಿಬಿಐಗೆ ವಹಿಸಬೇಕು ಅಂತಾ ಒತ್ತಾಯಿಸಿದ್ದಾರೆ.

ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ: ರೇಣುಕಾಸ್ವಾಮಿ ತಂದೆ ಬೇಸರ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 25, 2024 | 9:25 PM

ಚಿತ್ರದುರ್ಗ, ಆಗಸ್ಟ್​ 25: ಫೋಟೋ ವೈರಲ್​ ಆದ ಬೆನ್ನಲ್ಲೇ ಇದೀಗ ಜೈಲಿನಲ್ಲಿ ಸಹ ಕೈದಿಯ ಮೊಬೈಲ್‌ನಲ್ಲಿ ನಟ ದರ್ಶನ್ (Darshan) ವಿಡಿಯೋ ಕಾಲ್​ ವೈರಲ್​ ಆಗಿದೆ. ಈ ವಿಚಾರವಾಗಿ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ. ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ. ದರ್ಶನ್​ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ ರೆಸಾರ್ಟ್​ನಲ್ಲಿರುವಂತೆ ಕಂಡು ಶಾಕ್​ ಆಯ್ತು. ದರ್ಶನ್​ಗೆ ಸಿಗರೇಟ್​ ನೀಡಿದವರಿಗೆ ಶಿಕ್ಷೆ ಆಗಬೇಕು. ಮುಖ್ಯಮಂತ್ರಿ, ಗೃಹಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us