ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ: ರೇಣುಕಾಸ್ವಾಮಿ ತಂದೆ ಬೇಸರ

Edited By:

Updated on: Aug 25, 2024 | 9:25 PM

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿ ಜೈಲು ಸೇರಿರುವ ದರ್ಶನ್ ಕೂಡ ಇದೇ ಕಾರಾಗೃಹದಲ್ಲಿದ್ದಾರೆ. ಇದೀಗ ದರ್ಶನ್ ಜೈಲಿನಲ್ಲಿ ಕಾಫಿ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್​ ಆಗಿದೆ. ಫೋಟೋ ನೋಡಿದ ಮೃತ ರೇಣುಕಾಸ್ವಾಮಿ ಕುಟುಂಬ, ಜೈಲಧಿಕಾರಿಗಳ ವಿರುದ್ಧ ಕಿಡಿಕಾರಿದೆ. ಸಿಬಿಐಗೆ ವಹಿಸಬೇಕು ಅಂತಾ ಒತ್ತಾಯಿಸಿದ್ದಾರೆ.

ಚಿತ್ರದುರ್ಗ, ಆಗಸ್ಟ್​ 25: ಫೋಟೋ ವೈರಲ್​ ಆದ ಬೆನ್ನಲ್ಲೇ ಇದೀಗ ಜೈಲಿನಲ್ಲಿ ಸಹ ಕೈದಿಯ ಮೊಬೈಲ್‌ನಲ್ಲಿ ನಟ ದರ್ಶನ್ (Darshan) ವಿಡಿಯೋ ಕಾಲ್​ ವೈರಲ್​ ಆಗಿದೆ. ಈ ವಿಚಾರವಾಗಿ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ. ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ. ದರ್ಶನ್​ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ ರೆಸಾರ್ಟ್​ನಲ್ಲಿರುವಂತೆ ಕಂಡು ಶಾಕ್​ ಆಯ್ತು. ದರ್ಶನ್​ಗೆ ಸಿಗರೇಟ್​ ನೀಡಿದವರಿಗೆ ಶಿಕ್ಷೆ ಆಗಬೇಕು. ಮುಖ್ಯಮಂತ್ರಿ, ಗೃಹಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More