ಡಿಸೆಂಬರ್ 6ರ ನಂತರ ಮುಂದಿನ ನಡೆಯ ಬಗ್ಗೆ ಹೇಳುತ್ತೇನೆ: ವಿ ಸೋಮಣ್ಣ, ಮಾಜಿ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Nov 23, 2023 | 11:29 AM

ಹಿಂದೆ ಕೇಂದ್ರ ಸಚಿವರಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೊದಲಾದವರೆಲ್ಲ ತಮ್ಮ ಅಸಮಾಧಾನ ಪ್ರದರ್ಶಿಸಿದ್ದಾರೆ ಎಂದು ಹೇಳಿದ ಅವರು ರಾಜ್ಯ ಬಿಜೆಪಿ ಸೋಮನಹಳ್ಳಿ ಮುದುಕಿ ಕತೆಯನ್ನು ಹೋಲುತ್ತದೆ ಎಂದರು. 6ನೇ ತಾರೀಖಿನ ಬಳಿಕ ಎಲ್ಲ ತಿಳಿಸುವುದಾಗಿ ಮಾಜಿ ಸಚಿವ ಹೇಳಿದರು.

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ (V Somanna) ಪಕ್ಷದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸ್ಪಷ್ಟವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಡಿಸೆಂಬರ್ 6 ನೇ ತಾರೀಖಿನವರೆಗೆ ಯಾವುದೇ ಹೇಳಿಕೆ ನೀಡದಂತೆ ತಿಳಿಸಿರುವುದರಿಂದ ಅಲ್ಲಿಯವರೆಗ ಏನೂ ಮಾತಾಡಲ್ಲ ಅಂತ ಹೇಳಿದರು. ಆಸಮಾಧಾನಗೊಂಡಿರುವ ನಾಯಕರು ತಮ್ಮ ಕೋಪ ಹೊರಹಾಕಿದ್ದಾರೆ, ಸೋಮಣ್ಣ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಅಂತ ಕೇಳಿದಾಗ ನಿನ್ನೆ ಹಿರಿಯ ನಾಯಕರಾಗಿರುವ ಅರವಿಂದ ಲಿಂಬಾವಳಿ (Aravind Limbavali) ಹೇಳಿದ್ದು ಅಕ್ಷರಶಃ ಸತ್ಯ, ಹಿಂದೆ ಕೇಂದ್ರ ಸಚಿವರಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮೊದಲಾದವರೆಲ್ಲ ತಮ್ಮ ಅಸಮಾಧಾನ ಪ್ರದರ್ಶಿಸಿದ್ದಾರೆ ಎಂದು ಹೇಳಿದ ಅವರು ರಾಜ್ಯ ಬಿಜೆಪಿ ಸೋಮನಹಳ್ಳಿ ಮುದುಕಿ ಕತೆಯನ್ನು ಹೋಲುತ್ತದೆ ಎಂದರು. 6ನೇ ತಾರೀಖಿನ ಬಳಿಕ ಎಲ್ಲ ತಿಳಿಸುವುದಾಗಿ ಮಾಜಿ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.