AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಪ್ರಲ್ಹಾದ್ ಜೋಶಿಯವರ ವಿರುದ್ಧ ಟೀಕೆ ಮಾಡಿರುವನೇ ಹೊರತು ಬ್ರಾಹ್ಮಣ ಸಮಾಜದ ವಿರುದ್ಧ ಅಲ್ಲ: ಹೆಚ್ ಡಿ ಕುಮಾರಸ್ವಾಮಿ

ನಾನು ಪ್ರಲ್ಹಾದ್ ಜೋಶಿಯವರ ವಿರುದ್ಧ ಟೀಕೆ ಮಾಡಿರುವನೇ ಹೊರತು ಬ್ರಾಹ್ಮಣ ಸಮಾಜದ ವಿರುದ್ಧ ಅಲ್ಲ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 06, 2023 | 6:27 PM

Share

ತಾವು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಲೂ ಬ್ಯಾಹ್ಮಣ ಸಮುದಾಯಕ್ಕೆ ಸಾಕಷ್ಟು ಅನುದಾನಗಳನ್ನು ಒದಗಿಸಿರುವುದಾಗಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ (Pralhad Joshi) ನಡುವೆ ಜಗಳ ಮುಂದುವರಿದಿದೆ. ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕುಮಾರಸ್ವಾಮಿ ಅವರು, ತಾನು ಬ್ರಾಹ್ಮಣ ಸಮಾಜದ (Brahmin Community) ಬಗ್ಗೆ ಮಾತಾಡೇ ಇಲ್ಲ, ಆ ಸಮಾಜದ ಬಗ್ಗೆ ತನಗೆ ಅಪಾರ ಗೌರವವಿದೆ, ತಾನು ಮಾಡಿರುವ ಟೀಕೆ ವೈಯಕ್ತಿಕವಾದ್ದು ಮತ್ತು ಕೇವಲ ಜೋಶಿಯವರನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾತಾಡಿರುವುದಾಗಿ ಹೇಳಿದರು. ತಾವು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಲೂ ಬ್ಯಾಹ್ಮಣ ಸಮುದಾಯಕ್ಕೆ ಸಾಕಷ್ಟು ಅನುದಾನಗಳನ್ನು ಒದಗಿಸಿರುವುದಾಗಿ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 06, 2023 06:27 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.