ರಾಜಕೀಯಕ್ಕೆ ಬರೋ ಮುಂಚೆ ರೌಡಿಗಳಿಗೆ ಬಾಟ್ಲು ಸಪ್ಲೈ ಮಾಡಿದವನಲ್ಲ ನಾನು: ಯಾರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹೀಗೆ ಹೇಳಿದ್ದು!?

ಸಾಧು ಶ್ರೀನಾಥ್​

Updated on: Jul 05, 2023 | 5:04 PM

ಪೆನ್ ಡ್ರೈವ್ ಸಮಯ ಬರಲಿ ಬಿಡುಗಡೆ ಮಾಡ್ತೀನಿ. ಮೈ ಕೈ ಪರಚಿಕೊಳ್ಳೋದು ಬೇಡ ಅಂತಾ ಗುಂಡೂರಾವ್ ಹೇಳಿದರಲ್ಲ. ನಾನೇಕೆ ಮೈ ಕೈ ಪರಚಿಕೊಳ್ಳಲಿ..!? ಸೋತಾಗ್ಲೂ ಜನರ ಕಷ್ಟ ಸುಃಖ ಕೇಳಿದ್ದೇವೆ. ಬ್ಲ್ಯೂ ಫಿಲ್ಮ್ಂ ನ ಟೆಂಟ್ ನಲ್ಲಿ ತೋರಿಸಿ ಬಂದವನಲ್ಲ ನಾನು ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

H D Kumaraswamy: ರಾಜಕಾರಣಕ್ಕೆ ಬರೋ ಮುಂಚೆ ರೌಡಿಗಳಿಗೆ ಬಾಟಲಿ ತಂದುಕೊಟ್ಟಡುತ್ತಿದ್ದವನಲ್ಲ ನಾನು. ರಾಜಕೀಯಕ್ಕೆ ಬರೋ ಮುಂಚೆ ರೌಡಿಗಳಿಗೆ ಬಾಟ್ಲು ಸಪ್ಲೈ ಮಾಡಿದವ್ನಲ್ಲ ನಾನು! ಕಷ್ಟ ಪಟ್ಟು ರಾಜಕೀಯಕ್ಕೆ ಬಂದವನು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದರು. KST ಟ್ಯಾಕ್ಸ್ ನಾನ್ ಇಟ್ಕೊಂಡಿಲ್ಲ.. ತಾಜ್ ವೆಸ್ಟೆಂಡ್ ದ್ದು ಬಾಕಿ ಬಿಲ್ ಕಾಂಗ್ರೆಸ್ ಗೆ ಕಳಿಸಿದ್ರಾ? ನಾನೇನು ಬೀದಿಲಿ ಹೋಗೋದಾ.? ಎರಡು ಮೂರು ಲಕ್ಷ ಖರ್ಚು ಮಾಡೋ ಯೋಗ್ಯತೆ ಇಲ್ವಾ..? ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಲಿ. ರಾಜಕೀಯಕ್ಕೆ ಬರುವ ಮುಂಚೆ ಎಷ್ಟಿತ್ತು ಆಸ್ತಿ ಈಗ ಎಷ್ಟಿದೆ ತನಿಖೆ ಮಾಡಲಿ. ಇಂಧನ ಇಲಾಖೆ ಟ್ರಾನ್ಸ್ ಫರ್ ಆಗಿದೆ. 10 ಕೋಟಿಗೆ ಬಿಕರಿಯಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಪೆನ್ ಡ್ರೈವ್ ಸಮಯ ಬರಲಿ ಬಿಡುಗಡೆ ಮಾಡ್ತೀನಿ. ಮೈ ಕೈ ಪರಚಿಕೊಳ್ಳೋದು ಬೇಡ ಅಂತಾ ಗುಂಡೂರಾವ್ ಹೇಳಿದರಲ್ಲ. ನಾನೇಕೆ ಮೈ ಕೈ ಪರಚಿಕೊಳ್ಳಲಿ..!? ಸೋತಾಗ್ಲೂ ಜನರ ಕಷ್ಟ ಸುಃಖ ಕೇಳಿದ್ದೇವೆ. ಬ್ಲ್ಯೂ ಫಿಲ್ಮ್ಂ ನ ಟೆಂಟ್ ನಲ್ಲಿ ತೋರಿಸಿ ಬಂದವನಲ್ಲ ನಾನು ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ನಿನ್ನೆ ಮಂಡ್ಯದಲ್ಲಿ ವರ್ಗಾವಣೆ ಆಯ್ತಲ್ಲ. ತನಿಖೆಯಾದವರನ್ನು ಸಸ್ಪೆಂಡ್ ಆದವರನ್ನು ಮತ್ತೆ ತಗೊತಾರೆ. ಲಾಟರಿ ದಂಧೆ ನಡೆಸಿದವರನ್ನು ಆಚೆ ಕಳಿಸಿದವನು ನಾನು. ಬೇಕು ಅಂದಲ್ಲಾ ರೆಡಿ ಮಾಡಿ ಇಟ್ಟುಕೊಂಡಿದ್ದೀನಿ. ನಮ್ಮಿಂದ ಬೆಳೆದವು ನಮ್ಮ ಬಗ್ಗೆಯೇ ಮಾತಾಡ್ತಾರೆ. ವರ್ಗಾವಣೆ ದಂಧೆದೇ ಪೆನ್ ಡ್ರೈವ್. ಸಿಎಂಗೆ ಹೇಳಿ ತನಿಖೆ ಮಾಡಿಸಲಿ, ನಾನು ಹಿಡಿದುಕೊಂಡಿದ್ದೀ‌ನಾ? ನಿನ್ನೆ ಎರಡು ಟ್ರಾನ್ಸ್ ಫರ್ ಆಗಿದೆ. ಇಂಧನ ಇಲಾಖೆಯಲ್ಲಿ ಹತ್ತತ್ತು ಕೋಟಿಗೆ ವರ್ಗಾವಣೆ ಆಗಿದೆ. ಆ ಅಧಿಕಾರಿ ಒಂದು ದಿನಕ್ಕೆ ಐವತ್ತು ಲಕ್ಷ ಕಮಿಷನ್ ಹೊಡೆಯುತ್ತಾನೆ ಎಂದು ಹೆಚ್ ಡಿಕೆ ಹೇಳಿದರು.

Published on: Jul 05, 2023 05:04 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು