ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಶಾಸಕ ಜಿಟಿ ದೇವೇಗೌಡ ಪರೋಕ್ಷ ಟಾಂಗ್​​

ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ನಾಯಕರು ಆಗ್ರಹಿಸುತ್ತಾರೆ ಬಂದಿದ್ದಾರೆ. ಆದರೆ ಇಂದು ಜೆಡಿಎಸ್​ ಶಾಸಕ ಜಿಟಿ.ದೇವೇಗೌಡ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ನಾನು ಇರುವುದನ್ನೇ ಹೇಳಿದ್ದೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಶಾಸಕ ಜಿಟಿ ದೇವೇಗೌಡ ಪರೋಕ್ಷ ಟಾಂಗ್​​
|

Updated on: Oct 03, 2024 | 4:33 PM

ಮೈಸೂರು, ಅಕ್ಟೋಬರ್​ 03: ಹೆಚ್​ಡಿ ಕುಮಾರಸ್ವಾಮಿಗೆ ಜಿ.ಟಿ.ದೇವೇಗೌಡನ (GT Deve Gowda) ಅರ್ಥ ಮಾಡಿಕೊಳ್ಳಲು ಆಗಿಲ್ಲ. 18 ವರ್ಷದಲ್ಲಿ ಸಿದ್ದರಾಮಯ್ಯಗೆ ಒಂದೇ ಒಂದು ಲೆಟರ್​ ಕೊಟ್ಟಿಲ್ಲ. ನನ್ನನ್ನು ಇನ್ನೊಬ್ಬರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ನಾನು ಇರುವುದನ್ನೇ ಹೇಳಿದ್ದೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬರ ಬಗ್ಗೆ ಮಾತನಾಡಿಲ್ಲ. ಹೆಚ್​.ಡಿ.ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಹಾಗಾಗಿ ಅವರು ಕೂಡ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಸಿದ್ದರಾಮಯ್ಯ, ನನ್ನದು ಬಹಳ ಹಳೆಯ ವರ್ಷದ ಸಂಬಂಧ. ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬೇರೆ ಅಲ್ಲ, ನಾನು ಬೇರೆ ಅಲ್ಲ. ಈಗ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಜಕೀಯ ವೈರಿಗಳಾಗಿದ್ದೇವೆ. ಹಿಂದೆ ರಾಜಕಾರಣದಲ್ಲಿ ಒಂದು ಶಿಸ್ತು ಇತ್ತು, ಈಗ ಆ ರೀತಿ ಇಲ್ಲ. ರಾಜಕಾರಣದಲ್ಲಿ ಯಾವಾಗ ಏನು ಆಗುತ್ತೋ ಗೊತ್ತಿಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us