‘ಬಿಗ್ ಬಾಸ್ ಕಪ್​ಗೆ ಹನುಮಂತ ಅರ್ಹ’; ರಜತ್ ನೇರ ಮಾತು

Updated on: Jan 28, 2025 | 9:30 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ವಿನ್ ಆದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಅವರದ್ದು ಅದೃಷ್ಟ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಶ್ರಮ ಎಂದಿದ್ದಾರೆ. ಈ ಬಗ್ಗೆ ರಜತ್ ಅವರು ಕೂಡ ಮಾತನಾಡಿದ್ದಾರೆ. ಅವರು ಹೇಳಿದ್ದು ಏನು?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಹಾಗೂ ತ್ರಿವಿಕ್ರಂ ಅವರು ಉತ್ತಮವಾಗಿ ಆಡಿದ್ದಾರೆ. ಇವರನ್ನೂ ಹಿಂದಿಕ್ಕಿ ಮುಂದೆ ಸಾಗಿದ್ದಾರೆ ಹನುಮಂತ ಅವರು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರ ಗೆಲುವಿನ ಬಗ್ಗೆ ರಜತ್ ಮಾತನಾಡಿದ್ದಾರೆ. ‘ಜನ ಅವನನ್ನು ಇಷ್ಟಪಡುತ್ತಾರೆ. ಒಳ್ಳೆಯ ಪರ್ಫಾರ್ಮೆನ್ಸ್ ನೀಡಿದ್ದಾನೆ. ಫಿನಾಲೆ ಟಿಕೆಟ್ ಪಡೆದಿದ್ದ. ಇವನೇ ಗೆಲ್ಲೋದು ಅನ್ನೋದು ಮೊದಲೇ ಗೊತ್ತಿತ್ತು’ ಎಂದಿದ್ದಾರೆ ರಜತ್.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 28, 2025 09:29 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More