AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಮುಖ್ಯಮಂತ್ರಿಯಾದರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ: ಸಿದ್ದರಾಮಯ್ಯ

ರಾಜ್ಯದ ಮುಖ್ಯಮಂತ್ರಿಯಾದರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Oct 22, 2024 | 7:32 PM

Share

ಎಲ್ಲ ಜಾತಿ ಮತ್ತು ಧರ್ಮಗಳ ಜನ ತನಗೆ ಒಂದೇ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಕಲ ಬಡಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇನೆ, ದಶಕಗಳಿಂದ ರಾಜಕಾರಣದಲ್ಲಿದ್ದುಕೊಂಡು ಕಾಯ, ವಾಚಾ, ಮನಸಾ ಬಡಜನರ ಸೇವೆ ಮಾಡಿದ್ದೇನೆ ಎಂದು ಹೇಳಿದರು.

ಮೈಸೂರು: ನಗರದಲ್ಲಿಂದು ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ ತಾನು ಒಂದು ರಾಜ್ಯದ ಮುಖ್ಯಮಂತ್ರಿಯಾದರೂ ಈಗಲೂ ಒಂದು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವುದಾಗಿ ಹೇಳಿದರು. ಆದರೆ ವಿರೋಧ ಪಕ್ಷದ ನಾಯಕರಿಗೆಲ್ಲ ತನ್ನನ್ನು ಕಂಡು ಹೊಟ್ಟೆಯುರಿ, ಹಾಗಾಗೇ ತನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ವರ್ಚಸ್ಸು ಕಡಿಮೆ ಮಾಡುವ ಪ್ರಯತ್ನ ಮಾಡುತ್ತಾರೆ, ಅದರೆ ತನಗೆ ಜನ ನೀಡುವ ವರ್ಚಸ್ಸು, ಅಧಿಕಾರ ಮತ್ತು ಆಶೀರ್ವಾದ ಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಾಂಗ್ರೆಸ್​ನಿಂದ ಸ್ಪರ್ಧಿಸಬೇಕೆಂದು ಸಿದ್ದರಾಮಯ್ಯ ಬಯಸಿದರೆ ಅದು ಅವರ ದೊಡ್ಡ ಗುಣ: ಯೋಗೇಶ್ವರ್

Published on: Oct 22, 2024 06:26 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.