ರಾಜ್ಯದ ಮುಖ್ಯಮಂತ್ರಿಯಾದರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ: ಸಿದ್ದರಾಮಯ್ಯ

|

Updated on: Oct 22, 2024 | 7:32 PM

ಎಲ್ಲ ಜಾತಿ ಮತ್ತು ಧರ್ಮಗಳ ಜನ ತನಗೆ ಒಂದೇ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಕಲ ಬಡಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇನೆ, ದಶಕಗಳಿಂದ ರಾಜಕಾರಣದಲ್ಲಿದ್ದುಕೊಂಡು ಕಾಯ, ವಾಚಾ, ಮನಸಾ ಬಡಜನರ ಸೇವೆ ಮಾಡಿದ್ದೇನೆ ಎಂದು ಹೇಳಿದರು.

ಮೈಸೂರು: ನಗರದಲ್ಲಿಂದು ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ ತಾನು ಒಂದು ರಾಜ್ಯದ ಮುಖ್ಯಮಂತ್ರಿಯಾದರೂ ಈಗಲೂ ಒಂದು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವುದಾಗಿ ಹೇಳಿದರು. ಆದರೆ ವಿರೋಧ ಪಕ್ಷದ ನಾಯಕರಿಗೆಲ್ಲ ತನ್ನನ್ನು ಕಂಡು ಹೊಟ್ಟೆಯುರಿ, ಹಾಗಾಗೇ ತನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ವರ್ಚಸ್ಸು ಕಡಿಮೆ ಮಾಡುವ ಪ್ರಯತ್ನ ಮಾಡುತ್ತಾರೆ, ಅದರೆ ತನಗೆ ಜನ ನೀಡುವ ವರ್ಚಸ್ಸು, ಅಧಿಕಾರ ಮತ್ತು ಆಶೀರ್ವಾದ ಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಾಂಗ್ರೆಸ್​ನಿಂದ ಸ್ಪರ್ಧಿಸಬೇಕೆಂದು ಸಿದ್ದರಾಮಯ್ಯ ಬಯಸಿದರೆ ಅದು ಅವರ ದೊಡ್ಡ ಗುಣ: ಯೋಗೇಶ್ವರ್

Published On - 6:26 pm, Tue, 22 October 24

Follow us on