ಕಲುಷಿತಗೊಂಡಿರುವ ಶಿಕ್ಷಣ ಕ್ಷೇತ್ರದ ಬಗ್ಗೆ ನಾನು ಮಾತಾಡಿದ್ದು, ಹೇರ್ ಕಟಿಂಗ್ ಬಗ್ಗೆ ಅಲ್ಲ: ಬಿವೈ ವಿಜಯೇಂದ್ರ

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಮಾತಾಡಿದ ವಿಜಯೇಂದ್ರ ಜಾತಿ, ಪ್ರಾಂತ್ಯ ಮೊದಲಾದ ಎಲ್ಲ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಹೆಸರುಗಳನ್ನು ಪಕ್ಷದ ವರಿಷ್ಠರಿಗೆ ಕಳಿಸಲಾಗಿದೆ. ಅವರು ತೆಗೆದುಕೊಳ್ಳುವ ನಿರ್ಧಾರ ಅಂತಿಮ ಎಂದರು.

ಕಲುಷಿತಗೊಂಡಿರುವ ಶಿಕ್ಷಣ ಕ್ಷೇತ್ರದ ಬಗ್ಗೆ ನಾನು ಮಾತಾಡಿದ್ದು, ಹೇರ್ ಕಟಿಂಗ್ ಬಗ್ಗೆ ಅಲ್ಲ: ಬಿವೈ ವಿಜಯೇಂದ್ರ
|

Updated on: May 27, 2024 | 5:17 PM

ಮಂಗಳೂರು: ಇವರಿಬ್ಬರು ಯುವನಾಯಕರು, ಶಿವಮೊಗ್ಗ ಜಿಲ್ಲೆಯವರು ಮತ್ತು ಮಾಜಿ ಮುಖ್ಯಮಂತ್ರಿಗಳ ಸುಪುತ್ರರು. ಆದರೆ ಇವರ ನಡುವಿನ ರಾಜಕೀಯ ವೈಷಮ್ಯ ಹೇರ್ ಕಟಿಂಗ್​ಗೆ (hair cutting) ಬಂದು ನಿಂತಿದೆ. ಮೊದಲು ಬಿವೈ ವಿಜಯೇಂದ್ರ (BY Vijayendra) ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇರ್ ಸ್ಟೈಲ್ ಬಗ್ಗೆ ಕಾಮೆಂಟ್ ಮಾಡಿದರು. ನಂತರ ಸಚಿವ ನನ್ನ ಕ್ಷೌರಿಕನಿಗೆ ಪುರುಸೊತ್ತಿಲ್ಲ, ವಿಜಯೇಂದ್ರನೇ ಬಂದು ಮಾಡಲಿ ಅಂತ ಪ್ರತಿಕ್ರಿಯಿಸಿದರು. ಇವತ್ತು ಮಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳು ಮಧು ಬಂಗಾರಪ್ಪ ಹೇಳಿದ್ದನ್ನು ತಿಳಿಸಿದಾಗ ವಿಜಯೇಂದ್ರ ವಿಷಯವನ್ನು ಕ್ಷೌರ, ಕ್ಷೌರಿಕನಿಂದ ಬೇರೆಡೆ ತಿರುಗಿಸುವ ಪ್ರಯತ್ನ ಮಾಡಿದರು. ಶಿಕ್ಷಣ ಕ್ಷೇತ್ರದ ಸ್ಥಿತಿಯ ಬಗ್ಗೆ ಜನ ಆಡಿಕೊಳ್ಳುತ್ತಿರುವುದನ್ನು ತಾನು ಹೇಳಿದ್ದು, ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಕಲುಷಿತಗೊಂಡಿದೆ, ಮಕ್ಕಳ ಮತ್ತು ಪೋಷಕರ ಜೊತೆ ಶಿಕ್ಷಕರು ಸಹ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ, ಶಿಕ್ಷಣ ಸಚಿವರು ಈ ಸಮಸ್ಯೆಗಳ ಕಡೆ ಹೆಚ್ಚು ಗಮನ ನೀಡಬೇಕೆಂದು ತಾನು ಹೇಳಿದ್ದು ಎಂದು ವಿಜಯೇಂದ್ರ ಹೇಳಿದರು. ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಮಾತಾಡಿದ ವಿಜಯೇಂದ್ರ ಜಾತಿ, ಪ್ರಾಂತ್ಯ ಮೊದಲಾದ ಎಲ್ಲ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಹೆಸರುಗಳನ್ನು ಪಕ್ಷದ ವರಿಷ್ಠರಿಗೆ ಕಳಿಸಲಾಗಿದೆ. ಅವರು ತೆಗೆದುಕೊಳ್ಳುವ ನಿರ್ಧಾರ ಅಂತಿಮ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಲ್ಲ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಬಿಜೆಪಿ ನಿಲುವು ಸ್ಪಷ್ಟ: ಬಿವೈ ವಿಜಯೇಂದ್ರ  

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್