AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಹಾರ ನಿಧಿಗಾಗಿ ದೆಹಲಿ ತೆರಳಿ ಮನವಿ ಮಾಡಲು ನೇತೃತ್ವವಹಿಸಿ ಎಂದರೆ ಅಶೋಕರಿಂದ ಪ್ರತಿಕ್ರಿಯೆ ಇಲ್ಲ: ಸಿದ್ದರಾಮಯ್ಯ

ಬರ ಪರಿಹಾರ ನಿಧಿಗಾಗಿ ದೆಹಲಿ ತೆರಳಿ ಮನವಿ ಮಾಡಲು ನೇತೃತ್ವವಹಿಸಿ ಎಂದರೆ ಅಶೋಕರಿಂದ ಪ್ರತಿಕ್ರಿಯೆ ಇಲ್ಲ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 05, 2024 | 4:31 PM

ತಾವು ಖುದ್ದು ದೆಹಲಿಗೆ ತೆರಳಿ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದಾಗಿದೆ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೋಗಿ ಮನವಿ ಮಾಡಿದ್ದಾರೆ, ಶಿವಕುಮಾರ್ ಚಲುವರಾಯಸ್ವಾಮಿ ಮತ್ತು ಕೃಷ್ಣ ಭೈರೇಗೌಡ ಜೊತೆಯಾಗಿ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ಆದರೆ ಬರ ಪರಿಹಾರ ಮಾತ್ರ ಇನ್ನೂ ಮರೀಚಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಬರ ನಿರ್ವಹಣೆ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೇಂದ್ರದಿಂದ ಬರ ಪರಿಹಾರ ನಿಧಿ ಇದುವರೆಗೆ ಬಿಡುಗಡೆಯಾಗದಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರನ್ನು (HD Kumaraswamy) ತರಾಟೆಗೆ ತೆಗೆದುಕೊಂಡರು. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ನಾವು ಕೇಳುವ ರೀತಿ ಸರಿಯಿಲ್ಲ ಎಂದು ಅಶೋಕ ಹೇಳುತ್ತಾರೆ. ಸರಿ, ನಮ್ಮ ರೀತಿ ಸರಿಯಿಲ್ಲ, ನಿಮ್ಮ ನೇತೃತ್ವದಲ್ಲಿ ಹೋಗಿ ಕೇಂದ್ರದ ನಾಯಕರನ್ನು ಭೇಟಿಯಾಗೋಣ ಅಂತ ಹೇಳಿದರೆ ಅಶೋಕ ಅವರಿಂದ ಪ್ರತಿಕ್ರಿಯೆ ಇಲ್ಲ ಎಂದು ಸಿದ್ದಾರಾಮಯ್ಯ ಹೇಳಿದರು. ತಾವು ಖುದ್ದು ದೆಹಲಿಗೆ ತೆರಳಿ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದಾಗಿದೆ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೋಗಿ ಮನವಿ ಮಾಡಿದ್ದಾರೆ, ಶಿವಕುಮಾರ್ ಚಲುವರಾಯಸ್ವಾಮಿ ಮತ್ತು ಕೃಷ್ಣ ಭೈರೇಗೌಡ ಜೊತೆಯಾಗಿ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ಆದರೆ ಬರ ಪರಿಹಾರ ಮಾತ್ರ ಇನ್ನೂ ಮರೀಚಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಈಗ ಬಿಜೆಪಿಯೊಂದಿಗೆ ಜೆಡಿಎಸ್ ಸೇರಿಕೊಂಡಿದೆ. ಕುಮಾರಸ್ವಾಮಿ ಸರ್ಕಾರದ ಅಪ್ರೋಚ್ ಸರಿಯಿಲ್ಲ ಎನ್ನುತ್ತಾರೆ. ಇವರ ಅಪ್ರೋಚ್ ಸರಿಯಿದ್ದರೆ ಹೋಗಿ ಬಿಡುಗಡೆ ಮಾಡಿಸಿಕೊಂಡು ಬರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ತಾವು ಕಲಿತ ಶಾಲೆಗೆ 10 ಲಕ್ಷ ರೂ ವೈಯಕ್ತಿಕ ದೇಣಿಗೆ ನೀಡಿ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ