ಸೋನಿಯಾ ಗಾಂಧಿಯವರ ಮೂಲ ಯಾವುದು ಅಂತ ಸಿದ್ದರಾಮಯ್ಯ ಮೊದಲು ಹೇಳಲಿ: ಪ್ರತಾಪ್ ಸಿಂಹ

ಸಿದ್ದರಾಮಯ್ಯನವರು ತಮ್ಮ ಈ ಮಹಾತಾಯಿಯ ಮೂಲ ಯಾವುದು ಅಂತ ದಯವಿಟ್ಟು ಕರ್ನಾಟಕದ ಮಹಾಜನತೆಗೆ ತಿಳಿಸಲಿ ಎಂದು ಪ್ರತಾಪ್ ಸಿಂಹ ಹೇಳಿದರು.

ಸೋನಿಯಾ ಗಾಂಧಿಯವರ ಮೂಲ ಯಾವುದು ಅಂತ ಸಿದ್ದರಾಮಯ್ಯ ಮೊದಲು ಹೇಳಲಿ: ಪ್ರತಾಪ್ ಸಿಂಹ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: May 28, 2022 | 10:31 PM

Udupi: ಶನಿವಾರವೆಲ್ಲ ನಾವು ಇದನ್ನೇ ಚರ್ಚೆ ಮಾಡಿದ್ದೇವೆ. ಆರ್ ಎಸ್ ಎಸ್ ಮೂಲ ಯಾವುದು, ದ್ರಾವಿಡರು ಯಾರು, ಆರ್ಯರು ಯಾರು, ನಮ್ಮ ಮೂಲ ಯಾವುದು ಅವರ ಮೂಲ ಯಾವುದು, ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಮೂಲ ಯಾವುದು? ನಮ್ಮ ನಾಯಕರೆಲ್ಲ ಬರೀ ಇದನ್ನೇ ಮಾತಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಿದ್ದರಾಮಯ್ಯ ಕೆದಕಿರುವ ವಿಷಯದ ಬಗ್ಗೆ ಏನು ಹೇಳಿದರು, ಅದಕ್ಕೆ ಪ್ರತ್ಯುತ್ತರವಾಗಿ ತುಮಕೂರಲ್ಲಿ ಸಿದ್ದರಾಮಯಯ್ಯ ಏನು ಹೇಳಿದರು ಅನ್ನೋದನ್ನೆಲ್ಲ ನಾವು ವರದಿ ಮಾಡಿದ್ದೇವೆ. ಬಿಜೆಪಿಯ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಅವರು ಶನಿವಾರ ಉಡುಪಿ ಪ್ರವಾಸದಲ್ಲಿದ್ದರು. ಮಾಧ್ಯಮದವರು ಸಿಂಹ ಅವರಿಗೂ ಸಿದ್ದರಾಮಯ್ಯ ಆರ್ ಎಸ್ ಎಸ್ ಮೂಲದ ಪ್ರಶ್ನೆ ಬಗ್ಗೆ ಕೇಳಿದ್ದಾರೆ ಅಂತ ಹೇಳಿದಾಗ ಅವರು ವಿರೋಧ ಪಕ್ಷದ ನಾಯಕರ ಧೋರಣೆಯನ್ನೇ ಪ್ರಶ್ನಿಸಿದರು.

ಸಿದ್ದರಾಮಯ್ಯನವರು ಹಲವು ವರ್ಷಗಳ ಹಿಂದೆ ಜೆಡಿ(ಎಸ್) ಪಕ್ಷದ ಕಾರ್ಯಕರ್ತರಾಗಿದ್ದಾಗ, ಸೋನಿಯಾ ಗಾಂಧಿಯವರನ್ನು ಅವಳು, ಇವಳು ಅಂತ ಸಂಬೋಧಿಸುತ್ತಿದ್ದರು. ಕಾಂಗ್ರೆಸ್ ಪಕ್ಷದ ಸೇರಿದ ಬಳಿಕ ಸೋನಿಯಾರನ್ನು ತಾಯಿ, ಮಹಾತಾಯಿ, ಅಧಿನಾಯಕಿ ಅನ್ನುತ್ತಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಈ ಮಹಾತಾಯಿಯ ಮೂಲ ಯಾವುದು ಅಂತ ದಯವಿಟ್ಟು ಕರ್ನಾಟಕದ ಮಹಾಜನತೆಗೆ ತಿಳಿಸಲಿ ಎಂದು ಪ್ರತಾಪ್ ಸಿಂಹ ಹೇಳಿದರು.

ಸೋನಿಯಾ ಗಾಂಧಿಯವರ ಮೂಲದ ಬಗ್ಗೆ ತುಮಕೂರಲ್ಲಿ ಮಾತಾಡಿದ ಸಿದ್ದರಾಮಯ್ಯನವರು ಅವರು ಭಾರತ ದೇಶದ ಪೌರತ್ವ ಪಡೆದುಕೊಂಡಿರುವುದರಿಂದ ಅವರು ಭಾರತದಲ್ಲಿ ಹುಟ್ಟದಿದ್ದರೂ ಭಾರತೀಯರು ಎಂದು ಹೇಳಿದರು. ಈ ವಿಷಯ ವೀಕೆಂಡ್ ಚರ್ಚೆಗೆ ಗ್ರಾಸವಾಗಿದೆ ಮಾರಾಯ್ರೇ. ರವಿವಾರದಂದು ಎರಡೂ ಪಕ್ಷಗಳ ಹಲವು ನಾಯಕರು ಹೇಳಿಕೆಗಳನ್ನು ನೀಡಬಹುದು ಇಲ್ಲವೇ ಟ್ವೀಟ್ ಮಾಡಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್