‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಮಡೆನೂರು ಮನು ಅವರು ಮಾಡಿದ ಅವಾಂತರ ಒಂದೆರಡಲ್ಲ. ಸಹ ಕಲಾವಿದೆಗೆ ಅವರು ಕಿರುಕುಳ ನೀಡಿದ್ದರು. ಅವರ ಮೇಲೆ ಅತ್ಯಾಚಾರ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಮನು ಅವರು ಜೈಲು ಸೇರಿ ಬಂದಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಮಾತನಾಡಿದ್ದಾರೆ. ಅವರು ದುಖಃ ತೋಡಿಕೊಂಡಿದ್ದಾರೆ.
ಮಡೆನೂರು ಮನು (Madenuru Manu) ಅವರು ಸದ್ಯ ಜೈಲಿನಿಂದ ಬಿಡುಗಡೆ ಆಗಿ ಬಂದಿದ್ದಾರೆ. ಸಹ ಕಲಾವಿದೆ ಮೇಲೆ ಅತ್ಯಾಚಾರ ಮಾಡಿದ ಆರೋಪ ಅವರ ಮೇಲೆ ಇದೆ. ಈ ಮಧ್ಯೆ ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳ ಬಗ್ಗೆ ಮನು ಮಾತನಾಡಿದ್ದಾರೆ ಎನ್ನುವ ಆಡಿಯೋ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈ ಆಡಿಯೋ ಬಿಡೋಕೆ ಕಾರಣ ಏನು ಎಂಬುದನ್ನು ಸಂತ್ರಸ್ತೆ ವಿವರಿಸಿದ್ದಾರೆ. ‘ನನ್ನ ಹಾಗೂ ಮನು ಮಧ್ಯೆ ಇರೋದು ಪ್ರಕರಣ. ಈ ಪ್ರಕರಣಕ್ಕೆ ಸಂಬಂಧ ಇಲ್ಲದೆ ಇರುವ ಆಡಿಯೋನ ಅವನು ರಿಲೀಸ್ ಮಾಡಿದ. ಇದಕ್ಕೆ ನಾನು ಈ ಆಡಿಯೋ ಬಿಡುಗಡೆ ಮಾಡಿದೆ. ಅವನ ಬುದ್ಧಿ ಏನು ಎಂಬುದನ್ನು ಜನರಿಗೆ ತೋರಿಸಬೇಕಿತ್ತು’ ಎಂದಿದ್ದಾರೆ ಸಂತ್ರಸ್ತೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ

