AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು

‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು

ರಾಜೇಶ್ ದುಗ್ಗುಮನೆ
|

Updated on: Jun 10, 2025 | 10:34 AM

Share

ಮಡೆನೂರು ಮನು ಅವರು ಮಾಡಿದ ಅವಾಂತರ ಒಂದೆರಡಲ್ಲ. ಸಹ ಕಲಾವಿದೆಗೆ ಅವರು ಕಿರುಕುಳ ನೀಡಿದ್ದರು. ಅವರ ಮೇಲೆ ಅತ್ಯಾಚಾರ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಮನು ಅವರು ಜೈಲು ಸೇರಿ ಬಂದಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಮಾತನಾಡಿದ್ದಾರೆ. ಅವರು ದುಖಃ ತೋಡಿಕೊಂಡಿದ್ದಾರೆ.

ಮಡೆನೂರು ಮನು (Madenuru Manu) ಅವರು ಸದ್ಯ ಜೈಲಿನಿಂದ ಬಿಡುಗಡೆ ಆಗಿ ಬಂದಿದ್ದಾರೆ. ಸಹ ಕಲಾವಿದೆ ಮೇಲೆ ಅತ್ಯಾಚಾರ ಮಾಡಿದ ಆರೋಪ ಅವರ ಮೇಲೆ ಇದೆ. ಈ ಮಧ್ಯೆ ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳ ಬಗ್ಗೆ ಮನು ಮಾತನಾಡಿದ್ದಾರೆ ಎನ್ನುವ ಆಡಿಯೋ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈ ಆಡಿಯೋ ಬಿಡೋಕೆ ಕಾರಣ ಏನು ಎಂಬುದನ್ನು ಸಂತ್ರಸ್ತೆ ವಿವರಿಸಿದ್ದಾರೆ. ‘ನನ್ನ ಹಾಗೂ ಮನು ಮಧ್ಯೆ ಇರೋದು ಪ್ರಕರಣ. ಈ ಪ್ರಕರಣಕ್ಕೆ ಸಂಬಂಧ ಇಲ್ಲದೆ ಇರುವ ಆಡಿಯೋನ ಅವನು ರಿಲೀಸ್ ಮಾಡಿದ. ಇದಕ್ಕೆ ನಾನು ಈ ಆಡಿಯೋ ಬಿಡುಗಡೆ ಮಾಡಿದೆ. ಅವನ ಬುದ್ಧಿ ಏನು ಎಂಬುದನ್ನು ಜನರಿಗೆ ತೋರಿಸಬೇಕಿತ್ತು’ ಎಂದಿದ್ದಾರೆ ಸಂತ್ರಸ್ತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More