AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲವಾದ್ದರಿಂದ ನಿರಾಸೆಯಾಗಿಲ್ಲ, ಚಿಕ್ಕಬಳ್ಳಾಪುರ ಬಿಟಟುಹೋಗಲು ಕಷ್ಟವಾಗುತ್ತಿದೆ: ವೀರಪ್ಪ ಮೊಯ್ಲಿ

ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲವಾದ್ದರಿಂದ ನಿರಾಸೆಯಾಗಿಲ್ಲ, ಚಿಕ್ಕಬಳ್ಳಾಪುರ ಬಿಟಟುಹೋಗಲು ಕಷ್ಟವಾಗುತ್ತಿದೆ: ವೀರಪ್ಪ ಮೊಯ್ಲಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 08, 2024 | 4:25 PM

Share

ಟಿಕೆಟ್ ಸಿಕ್ಕಿಲ್ಲ ಅಂತ ತಮ್ಮ ಬೆಂಬಲಿಗರು ಬೇಸರ ಮಾಡಿಕೊಳ್ಳಬಾರದು, ರಾಷ್ಟ್ರೀಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ಯುವನಾಯಕ ರಕ್ಷಾರಾಮಯ್ಯ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಮೊಯ್ಲಿ ಹೇಳಿದರು. ಮುಂದಿನ ದಿನಗಳಲ್ಲಿ ಸ್ಥಾನಮಾನ ಸಿಗುವ ಬಗ್ಗೆಯೂ ಯಾವ ನಿರೀಕ್ಷೆಯನ್ನೂ ಇಟ್ಟುಕೊಂಡಿಲ್ಲ, ಪಕ್ಷ ಈ ಮೊದಲು ಸಾಕಷ್ಟು ಸ್ಥಾನಮಾನ ನೀಡಿ ಗೌರವಿಸಿದೆ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ (Veerappa Moily) ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ ಮತ್ತು ಇದನ್ನು ನಿರೀಕ್ಷಿಸಲಾಗಿತ್ತು. ಅವರಿಗೀಗ 84ರ ಇಳಿ ಪ್ರಾಯ ಮತ್ತು ಮುಂದಿನ ಲೋಕಸಭಾ ಚುನಾವಣೆ ಹೊತ್ತಿಗೆ 90ರ ಹೊಸ್ತಿಲಲ್ಲಿರುತ್ತಾರೆ. ನಗರದಲ್ಲಿ ಇಂದು ಟಿವಿ9 ವರದಿಗಾರನೊಂದಿಗೆ ತಮ್ಮ ಮುಂದಿನ ರಾಜಕೀಯ ಬದುಕಿ ಬಗ್ಗೆ ಮುಕ್ತವಾಗಿ ಮಾತಾಡಿರುವ ಮೊಯ್ಲಿ ಅವರು, ತಾನು ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ (aspirant), ಪಕ್ಷದ ಹೈಕಮಾಂಡ್ ಗೆ ಅದನ್ನು ಸ್ಪಷ್ಟಪಡಿಸಿದ್ದೆ, ನಿರಾಸೆಯಾಗುವ (disappointed) ಪ್ರಶ್ನೆ ಉದ್ಭವಿಸಲ್ಲ ಎಂದು ಹೇಳಿದರು. ಚಿಕ್ಕಬಳ್ಳಾಪರದಿಂದ ಎರಡು ಬಾರಿ ಸಂಸದನಾಗಿ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವನಾಗಿಯೂ ಕ್ಷೇತ್ರದ ಸಲುವಾಗಿ ದುಡಿದ ಕಾರಣ ಇದನ್ನು ಬಿಟ್ಟುಹೋಗಲು ಕಷ್ಟವಾಗುತ್ತಿದೆ ಎಂದು ಮೊಯ್ಲಿ ಹೇಳಿದರು. ಟಿಕೆಟ್ ಸಿಕ್ಕಿಲ್ಲ ಅಂತ ತಮ್ಮ ಬೆಂಬಲಿಗರು ಬೇಸರ ಮಾಡಿಕೊಳ್ಳಬಾರದು, ರಾಷ್ಟ್ರೀಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ಯುವನಾಯಕ ರಕ್ಷಾರಾಮಯ್ಯ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಮೊಯ್ಲಿ ಹೇಳಿದರು. ಮುಂದಿನ ದಿನಗಳಲ್ಲಿ ಸ್ಥಾನಮಾನ ಸಿಗುವ ಬಗ್ಗೆಯೂ ಯಾವ ನಿರೀಕ್ಷೆಯನ್ನೂ ಇಟ್ಟುಕೊಂಡಿಲ್ಲ, ಪಕ್ಷ ಈ ಮೊದಲು ಸಾಕಷ್ಟು ಸ್ಥಾನಮಾನ ನೀಡಿ ಗೌರವಿಸಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೋದಿ ವ್ರತದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ವೀರಪ್ಪ ಮೊಯ್ಲಿಗೆ ತಿವಿದ ಲೆಹರ್‌ ಸಿಂಗ್‌

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.