ದರ್ಶನ್ ಚಿತ್ರವೊಂದಕ್ಕೆ ₹ 22 ಕೋಟಿ ಸಂಭಾವನೆ ಪಡೆಯುತ್ತಿರುವುದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ

ದರ್ಶನ್ ಚಿತ್ರವೊಂದಕ್ಕೆ ₹ 22 ಕೋಟಿ ಸಂಭಾವನೆ ಪಡೆಯುತ್ತಿರುವುದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
|

Updated on: Jul 03, 2024 | 6:59 PM

ದರ್ಶನ್ ಅಭಿಮಾನಿಗಳಿಗೂ ಸರಿಗಮ ವಿಜಿ ಬುದ್ಧಿವಾದ ಹೇಳಿದರು. ಅವರು ಸುಖಾಸುಮ್ಮನೆ ಕಿರಿಚಾಡುವುದರಲ್ಲಿ ಅರ್ಥವಿಲ್ಲ, ಆದಷ್ಟು ಬೇಗ ದರ್ಶನ್ ಹೊರಬರಲಿ, ಎಲ್ಲ ಒಳ್ಳೆಯದಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಅವರು ಹೇಳಿದರು.

ಬೆಂಗಳೂರು: ಹಿರಿಯ ನಟ, ಸಹ ನಿರ್ದೇಶಕ ಮತ್ತು ರಂಗಕರ್ಮಿ ಸರಿಗಮ ವಿಜಿ ಇಂದು ನಗರದಲ್ಲಿ ಹಾಕಲಾಗಿದ್ದ ಟಿವಿ ಧಾರಾವಹಿಯ ಸೆಟ್ಟೊಂದರ ಸೈಡ್ ಲೈನ್ಸ್ ನಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಹಲವಾರು ವಿಷಯಗಳ ಬಗ್ಗೆ ಮಾತಾಡಿದರಾದರೂ ಹೆಚ್ಚಿನ ಮಾತುಕತೆ ನಟ ದರ್ಶನ್ ಮೇಲೆ ಕೇಂದ್ರೀಕೃತವಾಗಿತ್ತು. ದರ್ಶನ್ ಪಡೆಯುತ್ತಿದ್ದ ಸಂಭಾವನೆ ಬಗ್ಗೆ ಮಾತಾಡಿದ ಅವರು ಕಲಾಸಿ ಪಾಳ್ಯ ಚಿತ್ರಕ್ಕೆ ಅವನು ರೂ. 12 ಲಕ್ಷ ಸಂಭಾವನೆ ಪಡೆದಿದ್ದ, ನಂತರ ಅದು ಹೆಚ್ಚುತ್ತಾ ₹ 25 ಲಕ್ಷ ತಲುಪಿತ್ತು. ಆಮೇಲಿನ ದಿನಗಳಲ್ಲಿ ಅವನು 4-5 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾನೆ ಅಂತ ಗೊತ್ತಾದಾಗ ಈ ಪಾಟಿ ಸಂಭಾವನೆನಾ?ಅಂತ ಶಾಕ್ ಆಗಿತ್ತು. ಈಗ ಅವನು ಒಂದು ಚಿತ್ರಕ್ಕೆ ₹ 22 ಕೋಟಿ ಡಿಮ್ಯಾಂಡ್ ಮಾಡುತ್ತಿದ್ದಾನಂತೆ! ನನಗಂತೂ ನಂಬಲಾಗುತ್ತಿಲ್ಲ, ಕನ್ನಡ ಚಿತ್ರರಂಗದಲ್ಲಿ ಇಷ್ಟು ಸಂಭಾವನೆಯನ್ನು ಯಾರೆಂದರೆ ಯಾರೂ ತೆಗೆದುಕೊಂಡಿಲ್ಲ ಎಂದು ಸರಿಗಮ ವಿಜಿ ಹೇಳಿದರು. ಜೈಲಿಂದ ಹೊರಬಂದ ಬಳಿಕ ವರ್ತನೆಯನ್ನು ತಿದ್ದಿಕೋ, ದುಡುಕು ಬುದ್ಧಿ ಬಿಟ್ಟುಬಿಡು, ಭಗವಂತ ಈಗ ನಿಂಗೆ ಸೆಕೆಂಡ್ ಇನ್ನಿಂಗ್ಸ್ ಕೊಟ್ಡಿದ್ದಾನೆ, ಚೆನ್ನಾಗಿ ಬಾಳ್ವೆ ಮಾಡು ಅಂತ ಬುದ್ಧವಾದ ಹೇಳ್ತೀನಿ ಅಂದ ವಿಜಿ, ಜೈಲಲ್ಲಿ ಈಗಾಗಲೇ ಅವನಿಗೆ ಪಶ್ಚಾತ್ತಾಪವಾಗಿದೆ, ಖಂಡಿತವಾಗಿ ತನ್ನ ತಪ್ಪುಗಳನ್ನು ತಿದ್ದಿಕೊಳ್ಳುತ್ತಾನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದರ್ಶನ್ ಹೊರಗೆ ಬಂದ ಮೇಲೆ ಅವರೊಟ್ಟಿಗೆ ಸಿನಿಮಾ ಮಾಡುವೆ: ಕೆ ಮಂಜು

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ