ದರ್ಶನ್ ಚಿತ್ರವೊಂದಕ್ಕೆ ₹ 22 ಕೋಟಿ ಸಂಭಾವನೆ ಪಡೆಯುತ್ತಿರುವುದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ

ದರ್ಶನ್ ಅಭಿಮಾನಿಗಳಿಗೂ ಸರಿಗಮ ವಿಜಿ ಬುದ್ಧಿವಾದ ಹೇಳಿದರು. ಅವರು ಸುಖಾಸುಮ್ಮನೆ ಕಿರಿಚಾಡುವುದರಲ್ಲಿ ಅರ್ಥವಿಲ್ಲ, ಆದಷ್ಟು ಬೇಗ ದರ್ಶನ್ ಹೊರಬರಲಿ, ಎಲ್ಲ ಒಳ್ಳೆಯದಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಅವರು ಹೇಳಿದರು.

ದರ್ಶನ್ ಚಿತ್ರವೊಂದಕ್ಕೆ ₹ 22 ಕೋಟಿ ಸಂಭಾವನೆ ಪಡೆಯುತ್ತಿರುವುದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
|

Updated on: Jul 03, 2024 | 6:59 PM

ಬೆಂಗಳೂರು: ಹಿರಿಯ ನಟ, ಸಹ ನಿರ್ದೇಶಕ ಮತ್ತು ರಂಗಕರ್ಮಿ ಸರಿಗಮ ವಿಜಿ ಇಂದು ನಗರದಲ್ಲಿ ಹಾಕಲಾಗಿದ್ದ ಟಿವಿ ಧಾರಾವಹಿಯ ಸೆಟ್ಟೊಂದರ ಸೈಡ್ ಲೈನ್ಸ್ ನಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಹಲವಾರು ವಿಷಯಗಳ ಬಗ್ಗೆ ಮಾತಾಡಿದರಾದರೂ ಹೆಚ್ಚಿನ ಮಾತುಕತೆ ನಟ ದರ್ಶನ್ ಮೇಲೆ ಕೇಂದ್ರೀಕೃತವಾಗಿತ್ತು. ದರ್ಶನ್ ಪಡೆಯುತ್ತಿದ್ದ ಸಂಭಾವನೆ ಬಗ್ಗೆ ಮಾತಾಡಿದ ಅವರು ಕಲಾಸಿ ಪಾಳ್ಯ ಚಿತ್ರಕ್ಕೆ ಅವನು ರೂ. 12 ಲಕ್ಷ ಸಂಭಾವನೆ ಪಡೆದಿದ್ದ, ನಂತರ ಅದು ಹೆಚ್ಚುತ್ತಾ ₹ 25 ಲಕ್ಷ ತಲುಪಿತ್ತು. ಆಮೇಲಿನ ದಿನಗಳಲ್ಲಿ ಅವನು 4-5 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾನೆ ಅಂತ ಗೊತ್ತಾದಾಗ ಈ ಪಾಟಿ ಸಂಭಾವನೆನಾ?ಅಂತ ಶಾಕ್ ಆಗಿತ್ತು. ಈಗ ಅವನು ಒಂದು ಚಿತ್ರಕ್ಕೆ ₹ 22 ಕೋಟಿ ಡಿಮ್ಯಾಂಡ್ ಮಾಡುತ್ತಿದ್ದಾನಂತೆ! ನನಗಂತೂ ನಂಬಲಾಗುತ್ತಿಲ್ಲ, ಕನ್ನಡ ಚಿತ್ರರಂಗದಲ್ಲಿ ಇಷ್ಟು ಸಂಭಾವನೆಯನ್ನು ಯಾರೆಂದರೆ ಯಾರೂ ತೆಗೆದುಕೊಂಡಿಲ್ಲ ಎಂದು ಸರಿಗಮ ವಿಜಿ ಹೇಳಿದರು. ಜೈಲಿಂದ ಹೊರಬಂದ ಬಳಿಕ ವರ್ತನೆಯನ್ನು ತಿದ್ದಿಕೋ, ದುಡುಕು ಬುದ್ಧಿ ಬಿಟ್ಟುಬಿಡು, ಭಗವಂತ ಈಗ ನಿಂಗೆ ಸೆಕೆಂಡ್ ಇನ್ನಿಂಗ್ಸ್ ಕೊಟ್ಡಿದ್ದಾನೆ, ಚೆನ್ನಾಗಿ ಬಾಳ್ವೆ ಮಾಡು ಅಂತ ಬುದ್ಧವಾದ ಹೇಳ್ತೀನಿ ಅಂದ ವಿಜಿ, ಜೈಲಲ್ಲಿ ಈಗಾಗಲೇ ಅವನಿಗೆ ಪಶ್ಚಾತ್ತಾಪವಾಗಿದೆ, ಖಂಡಿತವಾಗಿ ತನ್ನ ತಪ್ಪುಗಳನ್ನು ತಿದ್ದಿಕೊಳ್ಳುತ್ತಾನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದರ್ಶನ್ ಹೊರಗೆ ಬಂದ ಮೇಲೆ ಅವರೊಟ್ಟಿಗೆ ಸಿನಿಮಾ ಮಾಡುವೆ: ಕೆ ಮಂಜು

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘