Assembly Polls: ಬಳ್ಳಾರಿಯಲ್ಲಿ ಯಾರೇ ಸ್ಪರ್ಧಿಸಿದರೂ ನಾನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ: ಜಿ ಸೋಮಶೇಖರ್ ರೆಡ್ಡಿ

Updated on: Feb 02, 2023 | 12:35 PM

ಮುಂಬರುವ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಜನಾರ್ಧನ ರೆಡ್ಡಿ ಅವರು ತಮ್ಮ ಪತ್ನಿ ಅರುಣ ಲಕ್ಷ್ಮಿಯವರನ್ನು ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಕಣಕ್ಕಿಳಿಸುತ್ತಿದ್ದಾರೆ.

ಬಳ್ಳಾರಿಯ ದೊಡ್ಡ ಶಕ್ತಿಯೆನಿಸಿಕೊಂಡಿದ್ದ ಗಾಲಿ ರೆಡ್ಡಿಗಳ ಕುಟುಂಬ ನಿಸ್ಸಂಶಯವಾಗಿ ದುರ್ಬಲಗೊಂಡಿದೆ. ಹಿಂದೆ ರೆಡ್ಡಿಗಳು ಬಿ ಎಸ್ ಆರ್ ಪಕ್ಷ ಸ್ಥಾಪಿಸಿದ್ದಾಗ ಇನ್ನೊಬ್ಬ ಸಹೋದರ ಕರುಣಾಕರ ರೆಡ್ಡಿ ಬಿಜೆಪಿ ಬಿಟ್ಟು ಬಂದಿರಲಿಲ್ಲ. ನಂತರ ದಿನಗಳಲ್ಲಿ ಸೋಮಶೇಖರ ರೆಡ್ಡಿ ಪುನಃ ಬಿಜೆಪಿಗೆ ಹೋದಾಗ ಅಕ್ರಮ ಗಣಿಗಾರಿಕೆ ಪ್ರಕಾರಣದಲ್ಲಿ ಜೈಲು ಸೇರಿದ್ದ ಗಾಲಿ ಜನಾರ್ಧನ ರೆಡ್ಡಿ ಒಂಟಿಯಾದರು. ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತಿಲ್ಲ ಅಂತ ಮೇಲಿಂದ ಫರ್ಮಾನು ಜಾರಿಯಾಗಿದೆ. ಹಾಗಾಗೇ, ಜನಾರ್ಧನ ರೆಡ್ಡಿ ತಮ್ಮದೇ ಅದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ಸಹೋದರರನ್ನು ಸೇರುವಂತೆ ಆಹ್ವಾನಿಸಿದರಾದರೂ ಯಾರು ಅವರ ಜೊತೆ ಸೇರಲಿಲ್ಲ. ಮುಂಬರುವ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಜನಾರ್ಧನ ರೆಡ್ಡಿ ಅವರು ತಮ್ಮ ಪತ್ನಿ ಅರುಣ ಲಕ್ಷ್ಮಿಯವರನ್ನು ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಕಣಕ್ಕಿಳಿಸುತ್ತಿದ್ದಾರೆ. ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದನ್ನು ವಿಡಿಯೋದಲ್ಲಿ ಕೇಳಬಹುದು.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Feb 02, 2023 12:34 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More